ಬ್ರೇಕಿಂಗ್ ನ್ಯೂಸ್
13-12-25 04:00 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.13: ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಮತಕಳ್ಳತನ ಪ್ರಕರಣದಲ್ಲಿ ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಪುತ್ರನ ಪಾತ್ರದ ಬಗ್ಗೆ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.
ಅಳಂದ ಮತಗಳವು ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಎಸ್ಐಟಿ (ಡಿ.12) ಶುಕ್ರವಾರ 22 ಸಾವಿರ ಪುಟಗಳ ದೋಷರೋಪ ಪಟ್ಟಿ ಸಲ್ಲಿಸಿದ್ದು, ಏಳು ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ನಡೆದಿದ್ದ ಮತಗಳ್ಳತನ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು 22 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪವನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಚುನಾವಣಾಧಿಕಾರಿಗಳಿಗೂ ದೂರು ನೀಡಲಾಗಿತ್ತು. ಅಲ್ಲದೆ, ಸಿದ್ದರಾಮಯ್ಯ ಸರ್ಕಾರವು ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿತ್ತು. ತನಿಖೆ ಸಂದರ್ಭದಲ್ಲಿ ಬಂಧನ ಭೀತಿ ಎದುರಿಸಿದ್ದ ಸುಭಾಷ್ ಗುತ್ತೇದಾರ್ ಮತ್ತು ಪುತ್ರ ನಿರೀಕ್ಷಣಾ ಜಮೀನು ಪಡೆದಿದ್ದರು.
ಅಳಂದ ಕ್ಷೇತ್ರದಲ್ಲಿ 5,994 ಮತದಾರರ ಹೆಸರು ಅಳಿಸಲಾಗಿದೆ ಎಂಬುದಾಗಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಮತ ಕಳವು ಯತ್ನಕ್ಕೆ ಸೈಬರ್ ಸೆಂಟರ್ ಒಂದನ್ನು ಬಳಸಿಕೊಂಡಿದ್ದು ಪತ್ತೆಯಾಗಿತ್ತು. ಅಲ್ಲದೆ ಮತದಾರ ಪಟ್ಟಿಯಿಂದ ಹೆಸರು ಅಳಿಸಲು ಗುತ್ತೇದಾರ್ ಹಣ ಪಾವತಿ ಮಾಡಿದ್ದರು ಎನ್ನಲಾಗಿತ್ತು.
ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದು ತನಿಖೆಯಲ್ಲಿ ಹಲವಾರು ಅಂಶಗಳು ಪತ್ತೆಯಾಗಿದ್ದವು. ತಾಂತ್ರಿಕ ಮಾಹಿತಿ ಆಧರಿಸಿ ತನಿಖೆ ನಡೆಸಿದ್ದ ಎಸ್ಐಟಿ, ಮತ ಅಳಿಸಿ ಹಾಕಲು ಸಲ್ಲಿಸಿದ್ದ ಅರ್ಜಿಗಳ ಮೂಲ ಕೆದಕಿದಾಗ ಹಣದ ವಹಿವಾಟು ಕಂಡುಬಂದಿತ್ತು. ಅಕ್ರಂ ಪಾಷ ಎಂಬಾತ ಕಾಲ್ ಸೆಂಟರ್ ನಡೆಸ್ತಿದ್ದು ಅದರ ಮೂಲಕ ಒಟಿಪಿ ಬಳಸಿಕೊಂಡು ಮತಪಟ್ಟಿಯಿಂದ ಹೆಸರು ಡಿಲೀಟ್ ಮಾಡಿದ್ದರು ಎನ್ನುವ ಮಾಹಿತಿ ಲಭಿಸಿತ್ತು.
The Special Investigation Team (SIT) probing the alleged voter theft case in the Aland Assembly constituency of Kalaburagi district has filed a charge sheet before the APJM court. The charge sheet reportedly details the role of former BJP MLA Subhash Guttedar and his son Harshanand in the case.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm