ಬ್ರೇಕಿಂಗ್ ನ್ಯೂಸ್
15-12-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಯುವಕ - ಯುವತಿಯರು ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರಿಂದ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಸ್ಥಿತಿಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ನಗರದಲ್ಲಿ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್ಎಎಲ್ ಎಇಸಿಎಸ್ ಲೇಔಟ್ನಲ್ಲಿರುವ ಹೋಟೆಲ್ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್ಗಳನ್ನು ಬುಕ್ ಮಾಡಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ ಎನ್ನಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್ಗೆ ತಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದಿದ್ದಾಗಲೇ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಕ್ಕೆ ಹಾರಿದ್ದಾಳೆ. ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A 21-year-old woman was critically injured after she allegedly jumped from a hotel balcony in panic during a police raid on a late-night drinks party in Bengaluru, triggering widespread concern and controversy.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm