ಬ್ರೇಕಿಂಗ್ ನ್ಯೂಸ್
15-12-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಯುವಕ - ಯುವತಿಯರು ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರಿಂದ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಸ್ಥಿತಿಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ನಗರದಲ್ಲಿ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್ಎಎಲ್ ಎಇಸಿಎಸ್ ಲೇಔಟ್ನಲ್ಲಿರುವ ಹೋಟೆಲ್ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್ಗಳನ್ನು ಬುಕ್ ಮಾಡಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ ಎನ್ನಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್ಗೆ ತಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದಿದ್ದಾಗಲೇ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಕ್ಕೆ ಹಾರಿದ್ದಾಳೆ. ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A 21-year-old woman was critically injured after she allegedly jumped from a hotel balcony in panic during a police raid on a late-night drinks party in Bengaluru, triggering widespread concern and controversy.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm