ಬ್ರೇಕಿಂಗ್ ನ್ಯೂಸ್
15-12-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಯುವಕ - ಯುವತಿಯರು ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರಿಂದ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಸ್ಥಿತಿಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ನಗರದಲ್ಲಿ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್ಎಎಲ್ ಎಇಸಿಎಸ್ ಲೇಔಟ್ನಲ್ಲಿರುವ ಹೋಟೆಲ್ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್ಗಳನ್ನು ಬುಕ್ ಮಾಡಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ ಎನ್ನಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್ಗೆ ತಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದಿದ್ದಾಗಲೇ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಕ್ಕೆ ಹಾರಿದ್ದಾಳೆ. ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A 21-year-old woman was critically injured after she allegedly jumped from a hotel balcony in panic during a police raid on a late-night drinks party in Bengaluru, triggering widespread concern and controversy.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
15-12-25 12:19 pm
Udupi Correspondent
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm