ಬ್ರೇಕಿಂಗ್ ನ್ಯೂಸ್
16-12-25 03:08 pm Bangalore Correspondent ಕರ್ನಾಟಕ
Photo credits : AI PHOTO
ಬೆಂಗಳೂರು, ಡಿ.16 : ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಅಕ್ರಮ ಆಸ್ತಿ ಮಾಡಿಟ್ಟಿರುವ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಅಧಿಕಾರಿಯೊಬ್ಬರು ಲೋಕಾಯುಕ್ತ ದಾಳಿಯಿಂದ ಭಯಗೊಂಡು ಹಣವನ್ನು ಟಾಯ್ಲೆಟ್ ಕಮೋಡ್ಗೆ ಸುರಿದು ಫ್ಲಶ್ ಮಾಡಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ಅವರ ಧಾರವಾಡದ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ರಾಜಶೇಖರ್ಗೆ ಸೇರಿದ ಒಟ್ಟು ಮೂರು ಕಡೆ ದಾಳಿ ನಡೆಸಲಾಗಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್ಗೆ ಸುರಿದು ಫ್ಲಶ್ ಮಾಡಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಬಾಗಿಲು ತೆಗೆಯದೆ ಲೊಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಗಳಿಕೆ ಆರೋಪ ಹಿನ್ನೆಲೆ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪಾ ನಾಯ್ಕ ಅವರ ಮನೆ, ಕಚೇರಿ ಸೇರಿ ವಿವಿಧೆಡೆ ದಾಳಿಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಏಕ ಕಾಲಕ್ಕೆ ದಾಳಿ ನಡೆಸಲಾಗಿದ್ದು ಬಸವನಗುಡಿ ಮತ್ತು ಕೆಂಗೇರಿಯ ಮನೆ, ಶಿವಮೊಗ್ಗದ ಕಚೇರಿ, ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಪಿಆರ್ಇಡಿ ಸೂಪರಿಡೆಂಟ್ ಬೈರೇಶ್ಗೂ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಏಕಕಾಲದಲ್ಲಿ ಮಂಡ್ಯದ ನಿವಾಸ, ಮದ್ದೂರಿನ ಅತ್ತೆ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೈರೇಶ್ ಮೇಲೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
The Karnataka Lokayukta police conducted simultaneous raids across several districts, including Dharwad, Shivamogga, Mandya, Chikkamagaluru and Bengaluru, targeting officials accused of possessing assets disproportionate to their known sources of income. The surprise inspections led to dramatic scenes, with one officer in Dharwad allegedly panicking and flushing bundles of currency notes down a toilet.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm