ಬ್ರೇಕಿಂಗ್ ನ್ಯೂಸ್
16-12-25 03:08 pm Bangalore Correspondent ಕರ್ನಾಟಕ
Photo credits : AI PHOTO
ಬೆಂಗಳೂರು, ಡಿ.16 : ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಅಕ್ರಮ ಆಸ್ತಿ ಮಾಡಿಟ್ಟಿರುವ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಅಧಿಕಾರಿಯೊಬ್ಬರು ಲೋಕಾಯುಕ್ತ ದಾಳಿಯಿಂದ ಭಯಗೊಂಡು ಹಣವನ್ನು ಟಾಯ್ಲೆಟ್ ಕಮೋಡ್ಗೆ ಸುರಿದು ಫ್ಲಶ್ ಮಾಡಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ಅವರ ಧಾರವಾಡದ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ರಾಜಶೇಖರ್ಗೆ ಸೇರಿದ ಒಟ್ಟು ಮೂರು ಕಡೆ ದಾಳಿ ನಡೆಸಲಾಗಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್ಗೆ ಸುರಿದು ಫ್ಲಶ್ ಮಾಡಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಬಾಗಿಲು ತೆಗೆಯದೆ ಲೊಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಗಳಿಕೆ ಆರೋಪ ಹಿನ್ನೆಲೆ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪಾ ನಾಯ್ಕ ಅವರ ಮನೆ, ಕಚೇರಿ ಸೇರಿ ವಿವಿಧೆಡೆ ದಾಳಿಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಏಕ ಕಾಲಕ್ಕೆ ದಾಳಿ ನಡೆಸಲಾಗಿದ್ದು ಬಸವನಗುಡಿ ಮತ್ತು ಕೆಂಗೇರಿಯ ಮನೆ, ಶಿವಮೊಗ್ಗದ ಕಚೇರಿ, ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಪಿಆರ್ಇಡಿ ಸೂಪರಿಡೆಂಟ್ ಬೈರೇಶ್ಗೂ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಏಕಕಾಲದಲ್ಲಿ ಮಂಡ್ಯದ ನಿವಾಸ, ಮದ್ದೂರಿನ ಅತ್ತೆ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೈರೇಶ್ ಮೇಲೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
The Karnataka Lokayukta police conducted simultaneous raids across several districts, including Dharwad, Shivamogga, Mandya, Chikkamagaluru and Bengaluru, targeting officials accused of possessing assets disproportionate to their known sources of income. The surprise inspections led to dramatic scenes, with one officer in Dharwad allegedly panicking and flushing bundles of currency notes down a toilet.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm