ಬ್ರೇಕಿಂಗ್ ನ್ಯೂಸ್
16-12-25 03:08 pm Bangalore Correspondent ಕರ್ನಾಟಕ
Photo credits : AI PHOTO
ಬೆಂಗಳೂರು, ಡಿ.16 : ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಅಕ್ರಮ ಆಸ್ತಿ ಮಾಡಿಟ್ಟಿರುವ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಅಧಿಕಾರಿಯೊಬ್ಬರು ಲೋಕಾಯುಕ್ತ ದಾಳಿಯಿಂದ ಭಯಗೊಂಡು ಹಣವನ್ನು ಟಾಯ್ಲೆಟ್ ಕಮೋಡ್ಗೆ ಸುರಿದು ಫ್ಲಶ್ ಮಾಡಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ಅವರ ಧಾರವಾಡದ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ರಾಜಶೇಖರ್ಗೆ ಸೇರಿದ ಒಟ್ಟು ಮೂರು ಕಡೆ ದಾಳಿ ನಡೆಸಲಾಗಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್ಗೆ ಸುರಿದು ಫ್ಲಶ್ ಮಾಡಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಬಾಗಿಲು ತೆಗೆಯದೆ ಲೊಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಗಳಿಕೆ ಆರೋಪ ಹಿನ್ನೆಲೆ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪಾ ನಾಯ್ಕ ಅವರ ಮನೆ, ಕಚೇರಿ ಸೇರಿ ವಿವಿಧೆಡೆ ದಾಳಿಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಏಕ ಕಾಲಕ್ಕೆ ದಾಳಿ ನಡೆಸಲಾಗಿದ್ದು ಬಸವನಗುಡಿ ಮತ್ತು ಕೆಂಗೇರಿಯ ಮನೆ, ಶಿವಮೊಗ್ಗದ ಕಚೇರಿ, ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಪಿಆರ್ಇಡಿ ಸೂಪರಿಡೆಂಟ್ ಬೈರೇಶ್ಗೂ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಏಕಕಾಲದಲ್ಲಿ ಮಂಡ್ಯದ ನಿವಾಸ, ಮದ್ದೂರಿನ ಅತ್ತೆ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೈರೇಶ್ ಮೇಲೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
The Karnataka Lokayukta police conducted simultaneous raids across several districts, including Dharwad, Shivamogga, Mandya, Chikkamagaluru and Bengaluru, targeting officials accused of possessing assets disproportionate to their known sources of income. The surprise inspections led to dramatic scenes, with one officer in Dharwad allegedly panicking and flushing bundles of currency notes down a toilet.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm