ಬ್ರೇಕಿಂಗ್ ನ್ಯೂಸ್
17-12-25 12:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ರೈಲ್ವೇ ವಿದ್ಯುದೀಕರಣ ಸಲುವಾಗಿ ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು- ಮಂಗಳೂರು- ಕಾರವಾರ ರೈಲು ಸೇವೆಯನ್ನು ಪುನಾರಂಭಗೊಳಿಸಲು ನಿರ್ಧರಿಸಲಾಗಿದೆ. ಕರಾವಳಿಗೆ ಸಂಚಾರ ಮಾಡುವ ವಿವಿಧ ರೈಲುಗಳಲ್ಲಿ ಒಂದಾದ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು (16575/16576) ಸೇವೆ ಮತ್ತೆ ಶುರುವಾಗಿದ್ದು ರೈಲ್ವೇ ಇಲಾಖೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಬೆಂಗಳೂರಿನ ಯಶವಂತಪುರದಿಂದ ಈ ರೈಲು ಸಂಚಾರ ಆರಂಭಿಸಲಿದ್ದು ವಾರದಲ್ಲಿ ಮೂರು ದಿನ ಇರಲಿದೆ. ಇತ್ತೀಚೆಗೆ ಯಶವಂತಪುರ, ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳ ಕಾರಣದಿಂದಾಗಿ ಈ ರೈಲು ಸೇವೆಯನ್ನು ಜೂನ್ ನಿಂದ ನವೆಂಬರ್ ವರೆಗೆ ಆರು ತಿಂಗಳ ಕಾಲ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ಸೇವೆ ಪುನಾರಂಭಿಸಲಾಗಿದೆ.
ಪ್ರವಾಸೋದ್ಯಮ ಉತ್ತೇಜನ ಉದ್ದೇಶದಿಂದ ಪ್ರಕೃತಿ ಸೌಂದರ್ಯ ಸವಿಯಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಈ ಗೊಮ್ಮಟೇಶ್ವರ ರೈಲಿಗೂ ವಿಸ್ಟಾಡೋಮ್ ಕೋಚ್ ಅಳವಡಿಸಿದೆ. ಅಗಲ ಗಾಜಿನ ಕಿಟಿಕಿ, ಬೃಹತ್ ಗಾಜಿನ ಮೇಲ್ಚಾವಣಿ, ವ್ಯವಸ್ಥಿತ ಆಸನಗಳಿದ್ದವು. ಇದರಿಂದ ಮಳೆಗಾಲದಲ್ಲಿ ಹಾಸನ, ಸಂಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಮಂಗಳೂರು ಮಾರ್ಗದುದ್ದಕ್ಕೂ ಕಾಣುವ ಪ್ರಕೃತಿಯನ್ನು ಸವಿಯಬಹುದಾಗಿತ್ತು. ಮಳೆಗಾಲದಲ್ಲೇ ಈ ರೈಲಿನ ರದ್ದತಿಯಿಂದ ಪ್ರಯಾಣಿಕರಿಗೆ ಒಂದಷ್ಟು ನಿರಾಸೆಯಾಗಿತ್ತು.
ಇದೀಗ ಶ್ರವಣಬೆಳಗೊಳ ಮೂಲಕ ಸಾಗುವ ಗೋಮಟೇಶ್ವರ ರೈಲು ಮತ್ತೆ ಆರಂಭಗೊಂಡಿದ್ದು ಯವಂತಪುರದಿಂದ ರವಿವಾರ, ಮಂಗಳವಾರ ಮತ್ತು ಗುರುವಾರ ಹೀಗೆ ವಾರದಲ್ಲಿ ಮೂರು ದಿನ ಪ್ರಯಾಣಿಸುತ್ತದೆ. ಯಶವಂತಪುರದಿಂದ ಹೊರಟು ಚಿಕ್ಕಬಾಣಾವರ, ಹಾಸನ, ಶ್ರವಣಬೆಳಗೊಳ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ- ಪುತ್ತೂರು, ಬಂಟವಾಳ ಮೂಲಕ ಮಂಗಳೂರಿಗೆ ಹೋಗುತ್ತದೆ. ಗೊಮ್ಮಟೇಶ್ವರ ರೈಲು ಸೇವೆ ಪುನಾರಂಭಗೊಳ್ಳುತ್ತಿದ್ದಂತೆ ಟಿಕೆಟ್ ಬುಕ್ಕಿಂಗ್ ಸಹ ಆರಂಭಗೊಂಡಿದೆ. ಪ್ರಯಾಣಕ್ಕೂ ಮುನ್ನ ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ https://www.indianrail.gov.in ಭೇಟಿ ನೀಡಬೇಕು. ರೈಲಿನ ಸೇವೆ ಬಗ್ಗೆ ಮಾಹಿತಿ, ಟಿಕೆಟ್, ಮಾರ್ಗ ಇತರ ಮಾಹಿತಿಗಾಗಿ ಸಹಾಯವಾಣಿ 139ಕ್ಕೆ ಕರೆ ಮಾಡುವಂತೆ ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
Railway authorities have announced the resumption of the Yeshwantpur–Mangaluru–Karwar Gomateshwara Express (Train No. 16575/16576), bringing relief to passengers traveling to the coastal region. The train service, which was suspended for six months due to electrification and infrastructure works on the Yeshwantpur–Hassan–Sakleshpur route, has now been restarted.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm