ಬ್ರೇಕಿಂಗ್ ನ್ಯೂಸ್
18-12-25 02:26 pm HK News Desk ಕರ್ನಾಟಕ
Photo credits : TV9 Kannada
ಶಿವಮೊಗ್ಗ, ಡಿ.18 : ಕಾಂಗ್ರೆಸ್ ಪಕ್ಷದ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧ ಬಿಜೆಪಿ ನಾಯಕರು ಪಿತೂರಿ ಮಾಡಿದ್ದಾರೆಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದರು. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿತ್ತು. ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರನ್ನು ಕೊನೆಗೆ ಪೊಲೀಸರು ಬಂಧಿಸಲು ಮುಂದಾಗಿದ್ದರು. ಇದೇ ವೇಳೆ, ತಳ್ಳಾಟ- ಜಟಾಪಟಿ ನಡೆದಿದ್ದು ಎಎಸ್ಐ ಅಮೃತಾ ಅವರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಾಗ ಚಿನ್ನದ ಕರಿಮಣಿ ನಾಪತ್ತೆಯಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಎಎಸ್ಐ ಅಮೃತಾ ಸೇರಿ ಮಹಿಳಾ ಸಿಬಂದಿಯೂ ಕರ್ತವ್ಯದಲ್ಲಿದ್ದರು. ಚಿನ್ನದ ಮಾಂಗಲ್ಯ ಸರ ಮಿಸ್ ಆಗಿರುವುದು ತಿಳಿಯುತ್ತಿದ್ದಂತೆ ಅಧಿಕಾರಿ ಸ್ಥಳದಲ್ಲೇ ಕಣ್ಣೀರು ಹಾಕಿದ ಘಟನೆ ನಡೆಯಿತು. ಪ್ರತಿಭಟನೆ ಕಾರ್ಯಕ್ರಮದಲ್ಲಿ ಕರ್ತವ್ಯ ನಿರತ ಅಧಿಕಾರಿಯ ಚಿನ್ನದ ಸರವೇ ಕಳವಾಗಿರುವುದು ಇಲಾಖೆಗೆ ಮತ್ತು ಸಹೋದ್ಯೋಗಿಗಳ ನಡುವೆ ಮುಜುಗರ ತಂದಿದೆ. ಸ್ಥಳದಲ್ಲಿದ್ದ ಇತರ ಪೊಲೀಸ್ ಅಧಿಕಾರಿಗಳು ಅಮೃತಾ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಪ್ರಯತ್ನ ಮಾಡಿದರು.
ಪೊಲೀಸರು ಕಳವು ಘಟನೆ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ. ಪ್ರತಿಭಟನೆಯ ವೇಳೆ ಸೆರೆಹಿಡಿಯಲಾದ ವಿಡಿಯೋ ತುಣುಕುಗಳು ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಜಾಲ ಬೀಸಲಾಗಿದೆ. ಕಾಂಗ್ರೆಸ್ ಪ್ರತಿಭಟನೆಯ ಗದ್ದಲದ ನಡುವೆ ಈ ದುಷ್ಕೃತ್ಯ ಎಸಗಿದವರು ಯಾರು ಎಂಬುದು ಪೊಲೀಸರ ತನಿಖೆಯಿಂದಲೇ ತಿಳಿಯಬೇಕಿದೆ.
An incident that has caused embarrassment within the police department occurred in Shivamogga on December 18, when unidentified miscreants allegedly stole a gold mangalsutra from a woman police officer who was on bandobast duty during a Congress party protest.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm