ಬ್ರೇಕಿಂಗ್ ನ್ಯೂಸ್
19-12-25 10:03 pm HK News Desk ಕರ್ನಾಟಕ
ಕಾರವಾರ, ಡಿ.19 : ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದ್ದು ಅದರಂತೆ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ, ನಾನೆಂದೂ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಲ್ಲ ಎಂದು ಹೇಳಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದು ಅಧಿಕಾರ ಹಸ್ತಾಂತರದ ಬಗ್ಗೆ ಹೊಸ ವಿಷಯ ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ನಮ್ಮ ಮಧ್ಯೆ ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಐದು ವರ್ಷ ಇರಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇಲ್ಲ ಎಂದೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇರುವುದಕ್ಕೆ ಅವರು ರಾಜ್ಯದ ಸಿಎಂ ಆಗಿದ್ದಾರೆ" ಎಂದರು.
ಸಿಎಂ ಬದಲಾವಣೆ ಆಗುವುದಿಲ್ಲವೇ ಎಂದು ಕೇಳಿದಾಗ, "ನೀವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೀರಿ. ನಮ್ಮಲ್ಲಿ ಅದು ಇಲ್ಲ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ" ಎಂದರು. ಕಳೆದ ಬಾರಿ ಬಂದಾಗ ನಿಮ್ಮ ಇಷ್ಟಾರ್ಥ ಸಿದ್ಧಿಯಾಗಿತ್ತು ಎಂದು ಹೇಳಿದ್ದೀರಿ, ಈ ಬಾರಿಯೂ ಆಗುವುದೇ ಎಂದು ಕೇಳಿದಾಗ, "ಅದೆಲ್ಲವನ್ನು ನಾನು ಹೇಳುವುದಿಲ್ಲ. ಇದು ನನ್ನ ಹಾಗೂ ಆ ತಾಯಿ ಮಧ್ಯೆ ಇರುವ ವಿಚಾರ. ಭಕ್ತ ಹಾಗೂ ಭಗವಂತನ ನಡುವಿನ ವಿಚಾರ. ವಿಘ್ನ ನಿವಾರಕ ವಿಘ್ನೇಶ್ವರನ ದರ್ಶನ ಪಡೆದಿದ್ದೇನೆ. ಮಹಾಬಲೇಶ್ವರನಿಗೆ ಪೂಜೆ ಮಾಡಿದ್ದೇನೆ, ಗಂಗಾಧರೇಶ್ವರನಿಗೆ ಪ್ರಾರ್ಥನೆ ಮಾಡಿದ್ದೇನೆ" ಎಂದರು.
ಇಂದು ಗೋಕರ್ಣಕ್ಕೆ ಬಂದಿದ್ದು ದೇವರ ದರ್ಶನ ಭಾಗ್ಯ ನನಗೆ ಸಿಕ್ಕಿದೆ. ಐದು ವರ್ಷಗಳ ಹಿಂದೆ ಜಗದೀಶ್ವರಿ ತಾಯಿ ಬಳಿಗೆ ಬಂದು, ನಮ್ಮ ಕುಟುಂಬದ ವಿಚಾರವಾಗಿ ಪ್ರಾರ್ಥಿಸಿದ್ದೆ. ಮತ್ತೆ ಇಲ್ಲಿಗೆ ಬರುವುದಾಗಿ ಪ್ರಾರ್ಥಿಸಿದ್ದೆ. ಅದರಂತೆ ಬಂದು ಜಗದೀಶ್ವರಿಗೆ ಪೂಜೆ ಸಲ್ಲಿಸಿದ್ದೇನೆ. ನನಗೆ ಹಾಗೂ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದು ಹಸನ್ಮುಖಿಯಾಗಿ ಇಲ್ಲಿಂದ ತೆರಳುತ್ತಿದ್ದೇನೆ ಎಂದು ತಿಳಿಸಿದರು.
Deputy Chief Minister D.K. Shivakumar made a surprising political statement, revealing that there is an “agreement” between him and Chief Minister Siddaramaiah, and clarified that he has never said Siddaramaiah will not continue as Chief Minister for five years.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm