ಬ್ರೇಕಿಂಗ್ ನ್ಯೂಸ್
19-12-25 10:03 pm HK News Desk ಕರ್ನಾಟಕ
ಕಾರವಾರ, ಡಿ.19 : ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದ್ದು ಅದರಂತೆ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ, ನಾನೆಂದೂ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಲ್ಲ ಎಂದು ಹೇಳಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದು ಅಧಿಕಾರ ಹಸ್ತಾಂತರದ ಬಗ್ಗೆ ಹೊಸ ವಿಷಯ ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ನಮ್ಮ ಮಧ್ಯೆ ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಐದು ವರ್ಷ ಇರಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇಲ್ಲ ಎಂದೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇರುವುದಕ್ಕೆ ಅವರು ರಾಜ್ಯದ ಸಿಎಂ ಆಗಿದ್ದಾರೆ" ಎಂದರು.
ಸಿಎಂ ಬದಲಾವಣೆ ಆಗುವುದಿಲ್ಲವೇ ಎಂದು ಕೇಳಿದಾಗ, "ನೀವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೀರಿ. ನಮ್ಮಲ್ಲಿ ಅದು ಇಲ್ಲ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ" ಎಂದರು. ಕಳೆದ ಬಾರಿ ಬಂದಾಗ ನಿಮ್ಮ ಇಷ್ಟಾರ್ಥ ಸಿದ್ಧಿಯಾಗಿತ್ತು ಎಂದು ಹೇಳಿದ್ದೀರಿ, ಈ ಬಾರಿಯೂ ಆಗುವುದೇ ಎಂದು ಕೇಳಿದಾಗ, "ಅದೆಲ್ಲವನ್ನು ನಾನು ಹೇಳುವುದಿಲ್ಲ. ಇದು ನನ್ನ ಹಾಗೂ ಆ ತಾಯಿ ಮಧ್ಯೆ ಇರುವ ವಿಚಾರ. ಭಕ್ತ ಹಾಗೂ ಭಗವಂತನ ನಡುವಿನ ವಿಚಾರ. ವಿಘ್ನ ನಿವಾರಕ ವಿಘ್ನೇಶ್ವರನ ದರ್ಶನ ಪಡೆದಿದ್ದೇನೆ. ಮಹಾಬಲೇಶ್ವರನಿಗೆ ಪೂಜೆ ಮಾಡಿದ್ದೇನೆ, ಗಂಗಾಧರೇಶ್ವರನಿಗೆ ಪ್ರಾರ್ಥನೆ ಮಾಡಿದ್ದೇನೆ" ಎಂದರು.
ಇಂದು ಗೋಕರ್ಣಕ್ಕೆ ಬಂದಿದ್ದು ದೇವರ ದರ್ಶನ ಭಾಗ್ಯ ನನಗೆ ಸಿಕ್ಕಿದೆ. ಐದು ವರ್ಷಗಳ ಹಿಂದೆ ಜಗದೀಶ್ವರಿ ತಾಯಿ ಬಳಿಗೆ ಬಂದು, ನಮ್ಮ ಕುಟುಂಬದ ವಿಚಾರವಾಗಿ ಪ್ರಾರ್ಥಿಸಿದ್ದೆ. ಮತ್ತೆ ಇಲ್ಲಿಗೆ ಬರುವುದಾಗಿ ಪ್ರಾರ್ಥಿಸಿದ್ದೆ. ಅದರಂತೆ ಬಂದು ಜಗದೀಶ್ವರಿಗೆ ಪೂಜೆ ಸಲ್ಲಿಸಿದ್ದೇನೆ. ನನಗೆ ಹಾಗೂ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದು ಹಸನ್ಮುಖಿಯಾಗಿ ಇಲ್ಲಿಂದ ತೆರಳುತ್ತಿದ್ದೇನೆ ಎಂದು ತಿಳಿಸಿದರು.
Deputy Chief Minister D.K. Shivakumar made a surprising political statement, revealing that there is an “agreement” between him and Chief Minister Siddaramaiah, and clarified that he has never said Siddaramaiah will not continue as Chief Minister for five years.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm