ಬ್ರೇಕಿಂಗ್ ನ್ಯೂಸ್
24-12-25 10:26 pm HK News Desk ಕರ್ನಾಟಕ
ಶಿವಮೊಗ್ಗ, ಡಿ 24 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕನ್ನೆಕೊಪ್ಪ ಹೊಸೂರು ಬಳಿ ಇಂದು ಮುಂಜಾನೆ ನಡೆದಿದೆ. ಕಾರು ಕೆರೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿಕಾರಿಪುರ ತಾಲೂಕಿನ ಪುನೇದಹಳ್ಳಿ ಗ್ರಾಮ ನಿವಾಸಿ ನವೀನ್(21) ಹಾಗೂ ರಾಮಚಂದ್ರ(37) ಮೃತರು. ರುದ್ರೇಶ್(26) ಹಾಗೂ ಮಂಜುನಾಥ್(21) ಇಬ್ಬರು ಪ್ರಾಣಾಪಾಯದಿಂದ ಪರಾಗಿದ್ದಾರೆ. ರಾಮಚಂದ್ರ ಕಾರನ್ನು ಚಲಾಯಿಸುತ್ತಿದ್ದರು.
ಇಂದು ಬೆಳಗಿನಜಾವ ಕಾರು ಶಿಕಾರಿಪುರದ ಪುನೇದಹಳ್ಳಿಯಿಂದ ಆನವಟ್ಟಿ ಕಡೆ ಮಾರುತಿ ಸುಜುಕಿ ಇಕೊ ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿದೆ. ಸ್ಥಳಕ್ಕೆ ಆನವಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂತಹದ್ದೇ ಮತ್ತೊಂದು ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಸಂಭವಿಸಿದೆ. ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಕ್ಕಲಕೋಟೆ ಪಟ್ಟಣದ ದೇವಿನಗರದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಬುಧವಾರ (ಇಂದು) ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಮೃತರನ್ನು ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಪ್ರಸಾದ್ ರಾವ್ (75), ಸಿರುಗುಪ್ಪ ನಿವಾಸಿಗಳಾದ ವಿಜಯ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರರಾವ್ (45) ಅವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಹಿಂತಿರುಗಿ ಬರುವಾಗ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದರು. ಚಾಲಕ ನಿದ್ದೆ ಮಂಪರಿನಲ್ಲಿ ಚಾಲನೆ ಮಾಡಿರುವುದು ಹಾಗೂ ಮಂಜುಗಟ್ಟಿದ ವಾತಾವರಣದ ಹಿನ್ನೆಲೆ ರಸ್ತೆ ಕಾಣದೇ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two people died after a car lost control and fell into a lake near Annevatti in Shivamogga district early Tuesday, while two others narrowly survived. In a separate accident in Ballari’s Siruguppa taluk, three members of the same family were killed and two seriously injured when their car rammed into a small bridge amid dense fog. Police have registered both cases and preliminary reports suggest overspeeding and poor visibility as possible causes.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm