ಬ್ರೇಕಿಂಗ್ ನ್ಯೂಸ್
26-12-25 01:35 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ 26 : ತಾಲೂಕಿನ ಅಜ್ಜವಾರ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ನಾಲ್ವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಜ್ಜವಾರ ಗ್ರಾಮದ ಒಂದೇ ಕುಟುಂಬದ ಅಣ್ಣ ನರಸಿಂಹ(22), ತಮ್ಮ ನಂದೀಶ್(20), ಅದೇ ಗ್ರಾಮದ ಮನೋಜ್(19), ಅರುಣ್ (20) ಮೃತರು.
ನಾಲ್ವರು ನಗರದ ಚರ್ಚ್ ನಲ್ಲಿ ಕ್ರಿಸ್ ಮಸ್ ಸಂಭ್ರಮ ನೋಡಿಕೊಂಡು ಒಂದೇ ಬೈಕಿನಲ್ಲಿ ಗ್ರಾಮಕ್ಕೆ ವಾಪಸ್ ಆಗುವ ವೇಳೆ ಪ್ರಮುಖ ರಸ್ತೆಯಿಂದ ದಿಢೀರ್ ತಿರುವು ಪಡೆಯಲು ಹೋದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ಚಿಕ್ಕಬಳ್ಳಾಪುರ - ಶಿಡ್ಲಘಟ್ಟ ರಸ್ತೆ ಮಧ್ಯೆ ಬರುವ ಅಜ್ಜವಾರ ಗ್ರಾಮಕ್ಕೆ ತಿರುವ ಪಡೆಯಲು ಯತ್ನಿಸಿದಾಗ ಎದುರುಗಡೆಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದೆ. ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
5 ಲಕ್ಷ ರೂ. ಪರಿಹಾರ ಘೋಷಣೆ ;
ಇನ್ನು ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿದರು. ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಹಾಗೂ ಕೂಡಲೇ ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಚಿತ್ರದುರ್ಗದ ಬಸ್ ದುರಂತದ ಬೆನ್ನಲ್ಲೇ ಸಂಭವಿಸಿದ ಈ ಸರಣಿ ಅಪಘಾತಗಳು ರಾಜ್ಯದ ಜನತೆಯಲ್ಲಿ ಮತ್ತು ವಾಹನ ಸವಾರರಲ್ಲಿ ತೀವ್ರ ಆತಂಕ ಮೂಡಿಸಿವೆ.
A tragic accident near Ajjavar village in Chikkaballapur claimed the lives of four youths when a tipper collided head-on with their bike. The deceased — Narasimha (22), his brother Nandeesh (20), and their friends Manoj (19) and Arun (20) — all belonged to the same locality.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am