ಬ್ರೇಕಿಂಗ್ ನ್ಯೂಸ್
28-12-25 09:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.28 : ದುರಾಡಳಿತ ಮತ್ತು ವ್ಯಾಪಕ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಲ್ಲ 25 ಗ್ರಾಮ ಪಂಚಾಯಿತಿಗಳ ವಿರುದ್ಧ ಇದೇ ಮೊದಲ ಬಾರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ಇತಿಹಾಸದಲ್ಲಿ ಇಂತಹ ಕ್ರಮ ಕೈಗೊಂಡಿರುವುದು ಇದೇ ಮೊದಲು.
ಸೆಪ್ಟೆಂಬರ್ 30 ಮತ್ತು ಡಿಸೆಂಬರ್ 2 ರಂದು ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನಂತರ ಉಪ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಈಗ ಅವರು ಜಿಲ್ಲಾಡಳಿತ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇಡೀ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ.
ಇದು ಕೇವಲ ಆರಂಭವಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಲು ಜಿಲ್ಲಾ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ಗಳಲ್ಲಿ ಸುಧಾರಣೆಗಳನ್ನು ತರಲು, ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಸರಿಪಡಿಸಲು ತುಮಕೂರು ಮತ್ತು ಮಂಡ್ಯದಂತಹ ಜಿಲ್ಲೆಗಳಲ್ಲಿ ಮುಂದಿನ ಕ್ರಮ ಜರುಗಿಸಲು ಯೋಜಿಸಿದ್ದಾರೆ.
ಚರಂಡಿಗಳ ನಿರ್ವಹಣೆ, ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು, ಘನತ್ಯಾಜ್ಯ ನಿರ್ವಹಣೆ, ಮಾಲಿನ್ಯ ಮತ್ತು ಅತಿಕ್ರಮಣದಿಂದ ಜಲಮೂಲಗಳ ಸಂರಕ್ಷಣೆ ಮತ್ತು ಅಕ್ರಮ ಗಣಿಗಾರಿಕೆ ಮತ್ತಿತರ ವಿಷಯಗಳ ಕುರಿತು ನ್ಯಾಯಮೂರ್ತಿ ವೀರಪ್ಪ ಪರಿಶೀಲಿಸುತ್ತಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್ಗಳು, ಡೇಟಾ ಎಂಟ್ರಿ ಆಪರೇಟರ್ಗಳು, ತಾಂತ್ರಿಕ ಸಹಾಯಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳು ಮತ್ತು ಗ್ರಾಮ ಪಂಚಾಯಿತಿಗಳ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಿರಿಯ ಎಂಜಿನಿಯರ್ಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಇಬ್ಬರು ಪಿಡಿಓಗಳ ಅಮಾನತು
ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರ್ವೇಶ್ ಕೆ. ವಿರುದ್ಧವೂ ದೂರು ದಾಖಲಾಗಿದೆ. ಇಬ್ಬರು PDO ಗಳನ್ನು ಅಮಾನತು ಗೊಳಿಸಲಾಗಿದೆ. ಬೋರ್ವೆಲ್ ದುರಸ್ತಿಗಾಗಿ ಗುತ್ತಿಗೆದಾರರಿಗೆ 68 ಲಕ್ಷ ರೂ. ದುರ್ಬಳಕೆ ಮತ್ತು 6.69 ಲಕ್ಷ ರೂ. ಬಿಡುಗಡೆ ಮಾಡದ ಅರಿಕುಂಟೆ ಪಿಡಿಓ ಎ.ಎನ್.ಶಂಕರಪ್ಪ ಮತ್ತು ಕರ್ತವ್ಯ ಲೋಪಕ್ಕಾಗಿ ನಂಬಿಹಳ್ಳಿ ಪಿಡಿಓ ಮಂಜುನಾಥ್ ಎನ್.ಕೆ ಅವರನ್ನು ಅಮಾನತುಗೊಳಿಸಲಾಗಿದೆ.
ಮಾಡದ ಕಾಮಗಾರಿಗೆ ಹಣ ಬಿಡುಗಡೆ
ದಳಸನೂರು ಗ್ರಾ.ಪಂ.ನಲ್ಲಿ 2019-2020ರಲ್ಲಿ ರಸ್ತೆ ನಿರ್ಮಾಣಕ್ಕೆ 3 ಲಕ್ಷ ರೂ. ವೆಚ್ಚ ಮಾಡಲಾಗಿತ್ತು. ಆದರೆ ಅದು ಅಸ್ತಿತ್ವದಲ್ಲಿಲ್ಲ. ಚರಂಡಿಗಳ ಹೂಳು ತೆಗೆಯಲು ಹಣ ಪಾವತಿಸಲಾಗಿದೆ, ಆದರೆ ಯಾವುದೇ ಕೆಲಸ ಮಾಡಿಲ್ಲ ಎಂದು ದೂರುದಾರರೊಬ್ಬರು ಉಲ್ಲೇಖಿಸಿದ್ದಾರೆ. ಅಲ್ಲದೇ ಮನರೇಗಾ ಅಡಿಯಲ್ಲಿ ಮಾಡಿಲ್ಲದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. 15ನೇ ಹಣಕಾಸು ಕಾರ್ಯಕ್ರಮದಡಿ ಚರಂಡಿಗಳ ಸ್ವಚ್ಛತೆ ಮತ್ತು ನೈರ್ಮಲ್ಯ ನಿರ್ವಹಣೆಗೆ ಯಾವುದೇ ಲೆಕ್ಕಪತ್ರಗಳನ್ನು ನಿರ್ವಹಿಸಿಲ್ಲ. ಆರರಲ್ಲಿ ಮೂರು ಕೆರೆಗಳು ಒತ್ತುವರಿಯಾಗಿದ್ದು, ಕಾಮಗಾರಿ ಅನುಷ್ಠಾನಕ್ಕೆ ಕೊಟೇಶನ್ ಇಲ್ಲದೇ ಬಿಲ್ ಕ್ಲಿಯರ್ ಮಾಡಲಾಗಿದೆ.
In an unprecedented move in Karnataka’s history, Upa Lokayukta Justice B. Veerappa has filed a suo motu corruption case against all 25 gram panchayats in Srinivaspura taluk of Kolar district. The action follows surprise inspections conducted on September 30 and December 2, revealing widespread mismanagement and large-scale corruption.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm