ಬ್ರೇಕಿಂಗ್ ನ್ಯೂಸ್
30-12-25 05:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ದಂಪತಿಯ ಪುತ್ರ ರೈಹಾನ್ ವಾದ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ರೈಹಾನ್ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ. ಇವರ ಸಂಬಂಧಕ್ಕೆ ಉಭಯ ಕುಟುಂಬಗಳೂ ಹಸಿರು ನಿಶಾನೆ ತೋರಿಸಿದ್ದು, ಶೀಘ್ರದಲ್ಲೇ ವಿವಾಹದ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.


ರೈಹಾನ್ ವಾದ್ರಾ ವೃತ್ತಿಯಲ್ಲಿ ಒಬ್ಬ ಪರಿಣಿತ ಛಾಯಾಗ್ರಾಹಕ. ತನ್ನ ಹತ್ತನೇ ವಯಸ್ಸಿಗೇ ಕ್ಯಾಮೆರಾ ಕೈಗೆತ್ತಿಕೊಂಡ ರೈಹಾನ್ ವನ್ಯಜೀವಿ, ಬೀದಿ ಛಾಯಾಗ್ರಹಣ ಮತ್ತು ಕಮರ್ಷಿಯಲ್ ಫೋಟೋಗ್ರಫಿಯಲ್ಲಿ ಗುರುತಿಸಿದ್ದಾರೆ. ಹಾಗೆಯೇ ಅವಿವಾ ಬೇಗ್ ಮೂಲತಃ ದೆಹಲಿ ಮೂಲದವರಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ ಆಗಿದ್ದಾರೆ. ದೆಹಲಿಯಲ್ಲಿ 'ಅಟೆಲಿಯರ್ 11' ಎಂಬ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದಾರೆ.
ಇದಲ್ಲದೆ ರಾಷ್ಟ್ರಮಟ್ಟದ ಮಾಜಿ ಫುಟ್ಬಾಲ್ ಆಟಗಾರ್ತಿ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದು ಶೀಘ್ರದಲ್ಲೇ ಮದುವೆ ದಿನಾಂಕವನ್ನು ಕುಟುಂಬ ಘೋಷಣೆ ಮಾಡಲಿದೆ. ರೈಹಾನ್ ವಾದ್ರಾ ಡೆಹ್ರಾಡೂನ್ನ ದಿ ಡೂನ್ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಅದೇ ಶಾಲೆಯಲ್ಲಿ ಅಧ್ಯಯನ ನಡೆಸಿದ್ದರು. ನಂತರ ಉನ್ನತ ಶಿಕ್ಷಣಕ್ಕಾಗಿ ಲಂಡನ್ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್ ಗೆ ತೆರಳಿದ್ದರು.
Raihan Vadra, son of Priyanka Gandhi and Robert Vadra, has gotten engaged to his childhood friend and longtime partner Aviva Baig. The couple, together for over seven years, exchanged rings in a private ceremony attended by close family. Raihan, a professional photographer, and Aviva, a photographer and producer, are expected to announce their wedding date soon.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 08:22 pm
Mangalore Correspondent
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
Mangalore Asha Pandit Death, Instagram: ಮಂಗಳೂ...
23-01-26 11:44 am
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
23-01-26 03:34 pm
Mangalore Correspondent
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm