ಬ್ರೇಕಿಂಗ್ ನ್ಯೂಸ್
30-12-25 05:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ದಂಪತಿಯ ಪುತ್ರ ರೈಹಾನ್ ವಾದ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ರೈಹಾನ್ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ. ಇವರ ಸಂಬಂಧಕ್ಕೆ ಉಭಯ ಕುಟುಂಬಗಳೂ ಹಸಿರು ನಿಶಾನೆ ತೋರಿಸಿದ್ದು, ಶೀಘ್ರದಲ್ಲೇ ವಿವಾಹದ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.


ರೈಹಾನ್ ವಾದ್ರಾ ವೃತ್ತಿಯಲ್ಲಿ ಒಬ್ಬ ಪರಿಣಿತ ಛಾಯಾಗ್ರಾಹಕ. ತನ್ನ ಹತ್ತನೇ ವಯಸ್ಸಿಗೇ ಕ್ಯಾಮೆರಾ ಕೈಗೆತ್ತಿಕೊಂಡ ರೈಹಾನ್ ವನ್ಯಜೀವಿ, ಬೀದಿ ಛಾಯಾಗ್ರಹಣ ಮತ್ತು ಕಮರ್ಷಿಯಲ್ ಫೋಟೋಗ್ರಫಿಯಲ್ಲಿ ಗುರುತಿಸಿದ್ದಾರೆ. ಹಾಗೆಯೇ ಅವಿವಾ ಬೇಗ್ ಮೂಲತಃ ದೆಹಲಿ ಮೂಲದವರಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ ಆಗಿದ್ದಾರೆ. ದೆಹಲಿಯಲ್ಲಿ 'ಅಟೆಲಿಯರ್ 11' ಎಂಬ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದಾರೆ.
ಇದಲ್ಲದೆ ರಾಷ್ಟ್ರಮಟ್ಟದ ಮಾಜಿ ಫುಟ್ಬಾಲ್ ಆಟಗಾರ್ತಿ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದು ಶೀಘ್ರದಲ್ಲೇ ಮದುವೆ ದಿನಾಂಕವನ್ನು ಕುಟುಂಬ ಘೋಷಣೆ ಮಾಡಲಿದೆ. ರೈಹಾನ್ ವಾದ್ರಾ ಡೆಹ್ರಾಡೂನ್ನ ದಿ ಡೂನ್ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಅದೇ ಶಾಲೆಯಲ್ಲಿ ಅಧ್ಯಯನ ನಡೆಸಿದ್ದರು. ನಂತರ ಉನ್ನತ ಶಿಕ್ಷಣಕ್ಕಾಗಿ ಲಂಡನ್ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್ ಗೆ ತೆರಳಿದ್ದರು.
Raihan Vadra, son of Priyanka Gandhi and Robert Vadra, has gotten engaged to his childhood friend and longtime partner Aviva Baig. The couple, together for over seven years, exchanged rings in a private ceremony attended by close family. Raihan, a professional photographer, and Aviva, a photographer and producer, are expected to announce their wedding date soon.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm