ಬ್ರೇಕಿಂಗ್ ನ್ಯೂಸ್
30-12-25 11:12 pm HK News Desk ಕರ್ನಾಟಕ
ಧಾರವಾಡ, ಡಿ.30 : ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದೆ.
ತಮ್ಮ ಭಾಷಣದ ಮೂಲಕ ಕೋಮು ಗಲಭೆಗೆ ಪ್ರಚೋದನೆ ನೀಡುವವರನ್ನು ಕರೆತಂದು ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿಸಬಾರದು ಎಂದು ಡಿಎಸ್ಎಸ್ ಕಡೆಯಿಂದ ವಿರೋಧ ವ್ಯಕ್ತವಾಗಿದೆ. ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗಲು ದಲಿತ ಸಂಘಟನೆ, ಕೃಷಿ ವಿವಿ ಬೋರ್ಡ್ ಸದಸ್ಯರು ವಿರೋಧ ವ್ಯಕ್ತಪಡಿಸಿ ವಿಶ್ವ ವಿದ್ಯಾಲಯದ ಗೇಟ್ ಮುಂದೆ ಧರಣಿ ನಡೆಸಿದ್ದು, ತೀವ್ರ ವಿರೋಧ ಹಿನ್ನಲೆ ಕಾರ್ಯಕ್ರಮ ರದ್ದುಗೊಳಿಸಲಾಯಿತು.
ಕೃಷಿ ವಿವಿ ಕಾರ್ಯಕ್ರಮಕ್ಕೆ ಯಾವುದೇ ಶಾಸಕರು ಅಥವಾ ಸಚಿವರನ್ನು ಕರೆಯದೆ ಚಕ್ರವರ್ತಿ ಸೂಲಿಬೆಲೆಯನ್ನು ಕರೆದ ಉದ್ದೇಶವೇನು ಎಂದು ಪ್ರತಿಭಟನಾಕಾರರು ವಿವಿ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಕೆಲ ಪ್ರತಿಭಟನಾಕಾರರು ವಿಶ್ವವಿದ್ಯಾಲಯದ ಗೇಟ್ ಏರಿ ಪ್ರತಿಭಟನೆ ನಡೆಸಿದ ಕಾರಣ ಹೈಡ್ರಾಮಾ ಸೃಷ್ಟಿಯಾಗಿದೆ.
ಸಿಂಂಡಿಕೇಟ್ ಮೆಂಬರ್ಗಳಿಗೆ ತಿಳಿಸದೆ ಕುಲಪತಿಗಳು ಕಾರ್ಯಕ್ರಮ ಮಾಡಲು ಹೊರಟಿದ್ದಾರೆ. ಇದೇ ರೀತಿ ಉದ್ಧಟತನ ಮುಂದುವರಿಸಿದರೆ ಅವರ ಕಚೇರಿಗೆ ನುಗ್ಗಿ ದಾಂಧಲೆ ನಡೆಸುತ್ತೇವೆ ಎಂದು ಡಿಎಸ್ಎಸ್ ಮುಖಂಡ ಪರಮೇಶ್ ಎಚ್ಚರಿಸಿದ್ದಾರೆ. ಮೊನ್ನೆ ನಡೆದ ಬೋರ್ಡ್ ಮೀಟಿಂಗ್ನಲ್ಲಿಯೂ ಕುಲಪತಿಗಳು ಈ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಶಿಷ್ಟಾಚಾರ ಉಲ್ಲಂಘಿಸಿ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗ್ತಿದೆ. ಚಕ್ರವರ್ತಿ ಸೂಲಿಬೆಲೆ ಏನು ಚಿನ್ನದ ರಸ್ತೆ ಮಾಡಲು ಇಲ್ಲಿ ಬರುತ್ತಿದಾರಾ? ಎಂದು ಸಿಂಡಿಕೇಟ್ ಸದಸ್ಯ ರವಿ ಪ್ರಶ್ನಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉಪನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
The induction ceremony of the student union at Dharwad’s University of Agricultural Sciences was cancelled after strong protests erupted against inviting speaker Chakravarthy Sulibele. Dalit organisations, DSS activists, and university board members opposed his participation, alleging that his speeches provoke communal unrest. Demonstrators staged a sit-in at the university gate, leading to high drama as some protesters climbed the gate.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am