ಬ್ರೇಕಿಂಗ್ ನ್ಯೂಸ್
31-12-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.31 : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಲಸಿಗರ ಮನೆಗಳು, ಶೆಡ್ಗಳ ತೆರವು ವಿಚಾರದಲ್ಲಿ ವಾಗ್ದಾಳಿ ನಡೆಸಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಭೇಟಿಯಾಗಿ ಕುಶಲೋಪರಿ ಮಾತನಾಡಿದ್ದಾರೆ. ಕೇರಳದ ವರ್ಕಳದಲ್ಲಿ ನಾರಾಯಣ ಗುರುಗಳ ಕಾರ್ಯಕ್ರಮಕ್ಕಾಗಿ ತೆರಳಿರುವ ಸಿದ್ದರಾಮಯ್ಯ ಅವರನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿಯಾಗಿದ್ದಾರೆ.
ಕೋಗಿಲು ಬಡಾವಣೆಯ ಅಕ್ರಮ ತೆರವಿನ ಬಗ್ಗೆ ಸರ್ಕಾರದ ಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡು ಕೇರಳ ಸಿಎಂಗೆ ತಿರುಗೇಟು ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಕೋಗಿಲು ಬಡಾವಣೆ ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ಸಂದರ್ಭದಲ್ಲಿ ಕೇರಳ ಪ್ರವಾಸ ತೆರಳಿದ ಸಿಎಂ ಸಿದ್ದರಾಮಯ್ಯ, ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತಿರುವನಂತಪುರದಲ್ಲಿ ಭೇಟಿಯಾಗಿದ್ದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಈ ಭೇಟಿ ವೇಳೆ, ಹೈಕಮಾಂಡ್ ಪ್ರತಿನಿಧಿ ಕೆಸಿ ವೇಣುಗೋಪಾಲ್ ಕೂಡ ಜೊತೆಗಿದ್ದರು.
ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಉಪಸ್ಥಿತರಿದ್ದರು. ಈ ವೇಳೆ ವೇದಿಕೆಯಲ್ಲಿ ಪಿಣರಾಯಿ ವಿಜಯನ್, ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ಈ ಬಗ್ಗೆ ಎಕ್ಸ್ ನಲ್ಲಿ ಸಂದೇಶ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, ಒಂದು ಕಾಲದಲ್ಲಿ ಜಾತಿಯಾಧಾರಿತ ಶೋಷಣೆ, ಅಸಮಾನತೆಗಳಿಂದ ನರಳುತ್ತಿದ್ದ ಕೇರಳದಲ್ಲಿ ಸಮಾನತೆಯ ಬೆಳಕು ಹರಿಸಿದ ನಾರಾಯಣ ಗುರುಗಳು ನಡೆದಾಡಿದ ನೆಲದಲ್ಲಿ ಜರುಗಲಿರುವ ಯಾತ್ರಾರ್ಥಿಗಳ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದೇನೆ. ಶಿವಗಿರಿ ಮಠದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಹಾಜರಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
Karnataka Chief Minister Siddaramaiah met Kerala CM Pinarayi Vijayan in Thiruvananthapuram even as tensions continue over the eviction of alleged illegal settlers in Bengaluru’s Kogilu area. The meeting took place during Siddaramaiah’s visit to attend the Narayana Guru event in Varkala, accompanied by KC Venugopal and BK Hariprasad.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm