ಬ್ರೇಕಿಂಗ್ ನ್ಯೂಸ್
30-12-20 08:40 pm Mangaluru Correspondent ಕರ್ನಾಟಕ
ಬೆಂಗಳೂರು, ಡಿ.30: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟಣೆ ವಿಚಾರದಲ್ಲಿ ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತವಾಗಿರುತ್ತದೆ. ಆದರೆ, ಕೆಲವು ಟಿವಿ ವಾಹಿನಿಗಳು ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯ ರೀತಿ ಪ್ರಸಾರ ಮಾಡುತ್ತಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ.

ಅಲ್ಲದೆ, ಪಕ್ಷ ರಹಿತ ಚುನಾವಣೆ ಆಗಿರುವ ಸಂದರ್ಭದಲ್ಲಿ ಯಾವುದೇ ಆಧಾರ ಇಲ್ಲದೆ ರಾಜಕೀಯ ಪಕ್ಷಗಳ ಪರ ಫಲಿತಾಂಶ ಪ್ರಸಾರ ಮಾಡಬಾರದು. ಈ ಬಗ್ಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಸೂಚನೆ ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಿಗೆ ರಾಜ್ಯ ಚುನಾವಣಾ ಆಯೋಗದಿಂದ ಸುತ್ತೋಲೆ ಮೂಲಕ ನಿರ್ದೇಶನ ನೀಡಲಾಗಿದೆ.
ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಡಿ.31 ರ ವರೆಗೂ ನಡೆಯಲಿದೆ. ಈ ಮಧ್ಯೆ ಪ್ರಸಾರ ಮಾಧ್ಯಮಗಳು ನಿರ್ದಿಷ್ಟ ರಾಜಕೀಯ ಪಕ್ಷಗಳು ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾಗಿ ಪ್ರಕಟ ಮಾಡುವಂತಿಲ್ಲ ಎಂದಿದ್ದರೂ, ಪಕ್ಷಗಳ ಬೆಂಬಲಿತರು ಎನ್ನುವ ನೆಲೆಯಲ್ಲಿ ಪ್ರಸಾರ ಮಾಡುತ್ತಿವೆ. ಈ ವೇಳೆ, ಹೆಚ್ಚಿನ ಬಾರಿ ರಾಜಕೀಯ ಪಕ್ಷಗಳ ನಾಯಕರು ಕೂಡ ತಮ್ಮ ಪಕ್ಷಗಳಿಗೇ ಗೆಲುವು ಅನ್ನುವ ನೆಲೆಯಲ್ಲಿ ಹೇಳಿಕೆ ನೀಡುತ್ತಾರೆ. ಅಲ್ಲದೆ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತಾರೆ. ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ಬಾವುಟ ಹಿಡಿದು ವಿಜಯೋತ್ಸವ ಆಚರಣೆಯೂ ನಡೆಯುತ್ತದೆ. ಈ ವೇಳೆ, ಮಾಧ್ಯಮಗಳು ಕೂಡ ಅದನ್ನೇ ಪ್ರಸಾರ ಮಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಎಚ್ಚರಿಸಬೇಕಾದ ಮಾಧ್ಯಮಗಳು ಅದನ್ನೇ ಪ್ರಸಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ಪರೋಕ್ಷವಾಗಿ ಚಾಟಿ ಬೀಸಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm