ಬ್ರೇಕಿಂಗ್ ನ್ಯೂಸ್
03-01-26 10:40 pm Bangalore Correspondent ಕರ್ನಾಟಕ
ಬೆಂಗಳೂರು, ಜ.3 : ಜನಾರ್ದನ ರೆಡ್ಡಿ ಅವರು ದೊಡ್ಡ ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಬೇಕಾದಲ್ಲಿ ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ, ಸುಲಭದಲ್ಲಿ ಕೊಲ್ಲುವುದಕ್ಕೆ ಸಾಧ್ಯವೇ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಜನಾರ್ದನ ರೆಡ್ಡಿ ತನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ಮಾಡಿದ ಆರೋಪಕ್ಕೆ ಡಿಕೆಶಿ ಹೀಗೆಂದು ಕೌಂಟರ್ ನೀಡಿದ್ದಾರೆ.
ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯ ಪುತ್ಥಳಿ ನಿರ್ಮಿಸುತ್ತಿದ್ದು ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ, ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಜನಾರ್ದನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ ಎಂದು ಡಿಸಿಎಂ ಪ್ರಶ್ನಿಸಿದ್ದಾರೆ. ಪಕ್ಷದ ವತಿಯಿಂದ ಅಲ್ಲಿನ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಘಟನೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ನನಗೆ ಈ ಘಟನೆ ತಿಳಿದ ತಕ್ಷಣ ಎಸ್ಪಿ ಜೊತೆ ಮಾತನಾಡಿದ್ದೇನೆ. ಎಸ್ಪಿ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೆ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್ಪಿ, ಐಜಿ ಮತ್ತು ಶಾಸಕರ ಜೊತೆಗೂ ಮಾತನಾಡಿದ್ದೇನೆ ಎಂದು ಡಿಸಿಎಂ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ, ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ನನಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅಲ್ಲಿ ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ.
ಬಳ್ಳಾರಿಯಲ್ಲಿ ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನು ಆಗಿದೆ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm