ಬ್ರೇಕಿಂಗ್ ನ್ಯೂಸ್
04-01-26 07:24 pm HK News Desk ಕರ್ನಾಟಕ
ಬಳ್ಳಾರಿ, ಜ.04: ಬ್ಯಾನರ್ ಗಲಾಟೆ ಬಳಿಕ ತನಗೆ ಜೀವ ಬೆದರಿಕೆ ಇದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪ ಮಾಡಿದ್ದಾರೆ. ನನಗೆ ಝಡ್ ಶ್ರೇಣಿಯ ಭದ್ರತೆ ಕೊಡಿ ಎಂದು ಕೇಂದ್ರ ಹಾಗೂ ರಾಜ್ಯ ಗೃಹ ಸಚಿವರಿಗೆ ರೆಡ್ಡಿ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಮಂತ್ರಿ, ಡಿಜಿ & ಐಜಿ ಸಲೀಂ ಅವರಿಗೂ ಪ್ರತ್ಯೇಕ ಪತ್ರ ಬರೆದಿದ್ದಾರೆ.
ಜ.1 ರಂದು ನನ್ನ ಹಾಗೂ ನನ್ನ ಕುಟುಂಬದ ಮೇಲೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಆತನ ಬೆಂಬಲಿಗರು ದಾಳಿ ನಡೆಸಿದ್ದರು. ನಾರಾ ಭರತ್ ರೆಡ್ಡಿ, ಸತೀಶ್ ರೆಡ್ಡಿ ಕಡೆಯಿಂದಲೇ ಪೆಟ್ರೋಲ್ ಬಾಂಬ್ ದಾಳಿ, ಬಂದೂಕಿನಿಂದ ಶೂಟ್ ಮಾಡಲು ಯತ್ನಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶಾಸಕ ಭರತ್ ರೆಡ್ಡಿಯಿಂದ ನನ್ನ ಕುಟುಂಬಕ್ಕೆ ಆಪತ್ತು ಇದೆ. ಕೂಡಲೇ ಝಡ್ ಶ್ರೇಣಿಯ ಭದ್ರತೆ ಒದಗಿಸಿ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕಾರ್ಯಕ್ರಮವೊಂದರ ಬ್ಯಾನರ್ ಅಳವಡಿಕೆ ವಿಚಾರವಾಗಿ ಜನಾರ್ದನ್ ರೆಡ್ಡಿ ಮನೆ ಬಳಿ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಫೈರಿಂಗ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ.
ಈ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪಾರ್ಟಿಯ 100 ಜನರನ್ನು ಭದ್ರತೆಗೆ ಇರಿಸಿಕೊಳ್ಳಲಿ, Z ಆದ್ರು ಕೇಳಲಿ, ಇರಾನ್ನಿಂದ ಯಾವುದಾದ್ರೂ ತೆಗೆದುಕೊಂಡು ಬರಲಿ, ಅಮೇರಿಕಾದಿಂದ ತರೆಸಿಕೊಳ್ಳಲಿ, ಇವರಾದ್ರೂ ಮಡಗಿಕೊಳ್ಳಲಿ ಯಾರು ಬೇಡ ಅಂತಾರೆ ಅಂತ ವ್ಯಂಗ್ಯವಾಡಿದ್ದಾರೆ.
Following a banner-related clash in Ballari, MLA Gali Janardhan Reddy has alleged that he faces a serious threat to his life. In letters to Union Home Minister Amit Shah, Karnataka Chief Minister Siddaramaiah, and senior police officials, Reddy has demanded Z-category security for himself and his family.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm