ಬ್ರೇಕಿಂಗ್ ನ್ಯೂಸ್
05-01-26 01:24 pm HK News Desk ಕರ್ನಾಟಕ
ಬಳ್ಳಾರಿ, ಜ.5 : ಬಳ್ಳಾರಿ ಬ್ಯಾನರ್ ಗಲಭೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯ 26 ಜನರು ಹಾಗೂ ಒಬ್ಬ ಖಾಸಗಿ ಗನ್ಮ್ಯಾನ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಗನ್ ಮ್ಯಾನ್ ಗುರುಚರಣ್ ಸಿಂಗ್ ನನ್ನು ಬಂಧಿಸಲಾಗಿದೆ.
ಬ್ಯಾನರ್ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಬಳ್ಳಾರಿ ಎಸ್ಪಿ ಅವರನ್ನು ಅಮಾನತುಗೊಳಿಸಿದ ಬಳಿಕ, ಪೊಲೀಸ್ ಇಲಾಖೆಯಿಂದಲೇ ಸುಮೊಟೋ ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದೆ. ಪೊಲೀಸರಿಗೆ ದೊರೆತ ಸಾಕ್ಷ್ಯ ಹಾಗೂ ವಿಡಿಯೋಗಳ ಆಧಾರದಲ್ಲಿ ಮೂರು ದಿನಗಳ ಬಳಿಕ ಅಧಿಕೃತವಾಗಿ 27 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉಳಿದವರಿಗೆ ಶೋಧ ನಡೆದಿದ್ದು ನಗರ ತೊರೆದವರ ಪತ್ತೆಗಾಗಿ ಪೊಲೀಸರು ತಂಡ ರಚಿಸಿ ಬಂಧನಕ್ಕಾಗಿ ಬಲೆಬೀಸಿದ್ದಾರೆ.
ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸತೀಶ್ ರೆಡ್ಡಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಲಿಗರಿಂದ ಮೂರು ಪ್ರಕರಣ, ಶಾಸಕ ಜನಾರ್ದನ ರೆಡ್ಡಿ ಸೇರಿ ಅವರ ಬೆಂಬಲಿಗರಿಂದ ಎರಡು ಪ್ರಕರಣ, ಪೊಲೀಸರಿಂದ ಸ್ವಯಂ ದೂರು ಸೇರಿ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಈವರೆಗೆ ಒಟ್ಟು ಆರು ಪ್ರಕರಣ ದಾಖಲಾಗಿದೆ.

ಗನ್ ಮ್ಯಾನ್ ಗುರುಚರಣ್ ಸಿಂಗ್ ಬಂಧನ
ಖಾಸಗಿ ಗನ್ ಮ್ಯಾನ್ಗಳು ನಡೆಸಿದ ಫೈರಿಂಗ್ ಸಂಬಂಧಿಸಿ ಸಿಸಿಟಿವಿಯಲ್ಲಿ ದೊರೆತ ಸಾಕ್ಷ್ಯ ಆಧರಿಸಿ ಗನ್ ಮ್ಯಾನ್ ಗುರುಚರಣ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಶಾಸಕ ಜನಾರ್ದನ ರೆಡ್ಡಿ ನಿವಾಸಕ್ಕೆ ಪೊಲೀಸ್ ತಂಡ ಭೇಟಿ ನೀಡಿ, ಗಲಭೆ ಸಂಬಂಧ ಮಾಹಿತಿ, ಸಾಕ್ಷ್ಯಗಳನ್ನು ಕಲೆ ಹಾಕಿದೆ. ಗಲಭೆ ದಿನ ಮನೆಯತ್ತ ತೂರಿ ಬಂದ ಕಲ್ಲು, ಸೆಲ್, ಬಾಟಲಿ, ಮೂರು ಖಾಸಗಿ ಬುಲೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿರಗುಪ್ಪ ರಸ್ತೆಯಲ್ಲಿ ನಡೆದ ಗಲಾಟೆ ವೇಳೆ ಬಂದ ಆಟೋದಲ್ಲಿ ಗಾಜಿನ ಬಾಟಲ್ ತಂದಿರುವ ವಿಡಿಯೊ ವೈರಲ್ ಆಗಿದೆ. ಕಲ್ಲುತೂರಾಟ, ಫೈರಿಂಗ್ ನಡುವೆಯೇ ಗುಂಪಿನಲ್ಲಿ ಪ್ರತ್ಯಕ್ಷವಾದ ಆಟೋದಲ್ಲಿ ಗಾಜಿನ ಬಾಟಲ್ಗಳಿದ್ದು, ಇವುಗಳನ್ನು ನೆರೆದಿದ್ದ ಗುಂಪಿನಲ್ಲಿ ಹಂಚಿಕೆ ಮಾಡುವುದನ್ನು ಕಂಡ ಪೊಲೀಸರು ತಡೆಯುತ್ತಿರುವ ದೃಶ್ಯ ಸೆರೆಯಾಗಿದೆ. ಗಾಜಿನ ಬಾಟಲ್ಗಳನ್ನು ಕೆಲವರು ಮನಸೋ ಇಚ್ಛೆ ತೂರಿದ್ದಾರೆ.
In the Bellary banner clash case, police have intensified the investigation and arrested 27 individuals, including workers from both the BJP and Congress, as well as a private gunman. The arrests were made based on CCTV evidence that captured stone-pelting, bottle-throwing, and firing during the violent incident.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm