ಬ್ರೇಕಿಂಗ್ ನ್ಯೂಸ್
05-01-26 01:24 pm HK News Desk ಕರ್ನಾಟಕ
ಬಳ್ಳಾರಿ, ಜ.5 : ಬಳ್ಳಾರಿ ಬ್ಯಾನರ್ ಗಲಭೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯ 26 ಜನರು ಹಾಗೂ ಒಬ್ಬ ಖಾಸಗಿ ಗನ್ಮ್ಯಾನ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಗನ್ ಮ್ಯಾನ್ ಗುರುಚರಣ್ ಸಿಂಗ್ ನನ್ನು ಬಂಧಿಸಲಾಗಿದೆ.
ಬ್ಯಾನರ್ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಬಳ್ಳಾರಿ ಎಸ್ಪಿ ಅವರನ್ನು ಅಮಾನತುಗೊಳಿಸಿದ ಬಳಿಕ, ಪೊಲೀಸ್ ಇಲಾಖೆಯಿಂದಲೇ ಸುಮೊಟೋ ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದೆ. ಪೊಲೀಸರಿಗೆ ದೊರೆತ ಸಾಕ್ಷ್ಯ ಹಾಗೂ ವಿಡಿಯೋಗಳ ಆಧಾರದಲ್ಲಿ ಮೂರು ದಿನಗಳ ಬಳಿಕ ಅಧಿಕೃತವಾಗಿ 27 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉಳಿದವರಿಗೆ ಶೋಧ ನಡೆದಿದ್ದು ನಗರ ತೊರೆದವರ ಪತ್ತೆಗಾಗಿ ಪೊಲೀಸರು ತಂಡ ರಚಿಸಿ ಬಂಧನಕ್ಕಾಗಿ ಬಲೆಬೀಸಿದ್ದಾರೆ.
ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸತೀಶ್ ರೆಡ್ಡಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಲಿಗರಿಂದ ಮೂರು ಪ್ರಕರಣ, ಶಾಸಕ ಜನಾರ್ದನ ರೆಡ್ಡಿ ಸೇರಿ ಅವರ ಬೆಂಬಲಿಗರಿಂದ ಎರಡು ಪ್ರಕರಣ, ಪೊಲೀಸರಿಂದ ಸ್ವಯಂ ದೂರು ಸೇರಿ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಈವರೆಗೆ ಒಟ್ಟು ಆರು ಪ್ರಕರಣ ದಾಖಲಾಗಿದೆ.

ಗನ್ ಮ್ಯಾನ್ ಗುರುಚರಣ್ ಸಿಂಗ್ ಬಂಧನ
ಖಾಸಗಿ ಗನ್ ಮ್ಯಾನ್ಗಳು ನಡೆಸಿದ ಫೈರಿಂಗ್ ಸಂಬಂಧಿಸಿ ಸಿಸಿಟಿವಿಯಲ್ಲಿ ದೊರೆತ ಸಾಕ್ಷ್ಯ ಆಧರಿಸಿ ಗನ್ ಮ್ಯಾನ್ ಗುರುಚರಣ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಶಾಸಕ ಜನಾರ್ದನ ರೆಡ್ಡಿ ನಿವಾಸಕ್ಕೆ ಪೊಲೀಸ್ ತಂಡ ಭೇಟಿ ನೀಡಿ, ಗಲಭೆ ಸಂಬಂಧ ಮಾಹಿತಿ, ಸಾಕ್ಷ್ಯಗಳನ್ನು ಕಲೆ ಹಾಕಿದೆ. ಗಲಭೆ ದಿನ ಮನೆಯತ್ತ ತೂರಿ ಬಂದ ಕಲ್ಲು, ಸೆಲ್, ಬಾಟಲಿ, ಮೂರು ಖಾಸಗಿ ಬುಲೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿರಗುಪ್ಪ ರಸ್ತೆಯಲ್ಲಿ ನಡೆದ ಗಲಾಟೆ ವೇಳೆ ಬಂದ ಆಟೋದಲ್ಲಿ ಗಾಜಿನ ಬಾಟಲ್ ತಂದಿರುವ ವಿಡಿಯೊ ವೈರಲ್ ಆಗಿದೆ. ಕಲ್ಲುತೂರಾಟ, ಫೈರಿಂಗ್ ನಡುವೆಯೇ ಗುಂಪಿನಲ್ಲಿ ಪ್ರತ್ಯಕ್ಷವಾದ ಆಟೋದಲ್ಲಿ ಗಾಜಿನ ಬಾಟಲ್ಗಳಿದ್ದು, ಇವುಗಳನ್ನು ನೆರೆದಿದ್ದ ಗುಂಪಿನಲ್ಲಿ ಹಂಚಿಕೆ ಮಾಡುವುದನ್ನು ಕಂಡ ಪೊಲೀಸರು ತಡೆಯುತ್ತಿರುವ ದೃಶ್ಯ ಸೆರೆಯಾಗಿದೆ. ಗಾಜಿನ ಬಾಟಲ್ಗಳನ್ನು ಕೆಲವರು ಮನಸೋ ಇಚ್ಛೆ ತೂರಿದ್ದಾರೆ.
In the Bellary banner clash case, police have intensified the investigation and arrested 27 individuals, including workers from both the BJP and Congress, as well as a private gunman. The arrests were made based on CCTV evidence that captured stone-pelting, bottle-throwing, and firing during the violent incident.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am