ಬ್ರೇಕಿಂಗ್ ನ್ಯೂಸ್
05-01-26 08:17 pm HK News Desk ಕರ್ನಾಟಕ
ಕೊಪ್ಪಳ, ಜ.5 : ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರ ಎದುರೇ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರು ಹೊಯ್ದಾಟ ನಡೆಸಿದ ಘಟನೆ ನಡೆದಿದ್ದು ತೀವ್ರ ಗದ್ದಲ, ವಾಗ್ವಾದಕ್ಕೆ ಕಾರ್ಯಕ್ರಮ ಸಾಕ್ಷಿಯಾಯಿತು.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಪ್ರೋಟೋಕಾಲ್ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಂಸದ ರಾಜಶೇಖರ ಹಿಟ್ನಾಳ್ ಅವರ ಹೆಸರು ಇಲ್ಲದಿರುವುದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಇದನ್ನು ಪ್ರೋಟೋಕಾಲ್ ಉಲ್ಲಂಘನೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು ಸಚಿವ ಸೋಮಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಕಾರ್ಯಕರ್ತರು ಕುರ್ಚಿ ಎಸೆಯಲು ಯತ್ನಿಸಿದ್ದು, ಸಚಿವ ಸೋಮಣ್ಣ ಅವರ ಕಾರಿನ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು.




ಸಚಿವ ಸೋಮಣ್ಣ ಶಂಕುಸ್ಥಾಪನೆ ಮಾಡಲು ಮುಂದಾದಾಗ, ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಕೂಡ ಪ್ರೋಟೋಕಾಲ್ ವಿಚಾರವನ್ನು ಮುಂದಿಟ್ಟು ಸಚಿವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆ ಬಳಿ ಸಚಿವ ಸೋಮಣ್ಣ, “ಇಂತಹ ಕಾರ್ಯಕ್ರಮಗಳಲ್ಲಿ ಪಟಾಲಂ ತೆಗೆದುಕೊಂಡು ಗಲಾಟೆ ಮಾಡಬೇಡಿ” ಎಂದು ಹೇಳಿದ್ದು ತಂಗಡಗಿ ಬೆಂಬಲಿಗರನ್ನು ಕೆರಳಿಸಿತು. ವೇದಿಕೆ ಬಳಿಯೇ ಎರಡೂ ಕಡೆಯ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ಗಲಾಟೆ ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಸಚಿವ ಸೋಮಣ್ಣ ಕಾರ್ಯಕ್ರಮ ಮೊಟಕುಗೊಳಿಸಿ ಸ್ಥಳದಿಂದ ತೆರಳಿದರು. ಹೀಗಾಗಿ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯದೆ ಅರ್ಧದಲ್ಲೇ ಮುಕ್ತಾಯಗೊಂಡಿತು. ಕಾರ್ಯಕ್ರಮ ಮುಗಿಸಿ ಹೊರಟಾಗಲೂ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಸೋಮಣ್ಣ ಮೇಲೆ ಕುರ್ಚಿ ತೂರಲು ಯತ್ನಿಸಿದ್ದು, ಅಂಗರಕ್ಷಕರು ತಕ್ಷಣ ಅಡ್ಡ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಸೋಮಣ್ಣ, ಪ್ರೋಟೋಕಾಲ್ ಏನೂ ಉಲ್ಲಂಘನೆ ಆಗಿಲ್ಲ. ಇದು ಕೇಂದ್ರ ಸರ್ಕಾರದ ಹಣದಲ್ಲಿ ನಡೆಯುತ್ತಿರುವ ಯೋಜನೆ. ಉದ್ದೇಶಪೂರ್ವಕ ಕಾರ್ಯಕರ್ತರನ್ನು ತಂದು ಗಲಾಟೆ ಮಾಡಿಸಲಾಗಿದೆ” ಎಂದು ಆರೋಪಿಸಿದರು.
A railway flyover foundation event in Hitnal village turned chaotic when BJP and Congress workers clashed in front of Union Minister V. Somanna over alleged protocol violations. Congress supporters objected to the absence of District In-charge Minister Shivaraj Tangadagi and MP Rajshekhar Hitnal’s names on the event invitation.
07-01-26 12:12 pm
Bangalore Correspondent
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm