ಬ್ರೇಕಿಂಗ್ ನ್ಯೂಸ್
05-01-26 10:06 pm HK News Desk ಕರ್ನಾಟಕ
ಬೀದರ್, ಜ.05: ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡರು.
ಇದರಿಂದ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಸಭೆಯನ್ನೇ ಮುಂದೂಡಲಾಯಿತು.
ಹುಮನಾಬಾದ್ ಮತ ಕ್ಷೇತ್ರದ ಅರಣ್ಯ ಜಮೀನಿನ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು. ಚರ್ಚೆಯಲ್ಲಿ ಭಾಗವಹಿಸಿ ಡಾ. ಸಿದ್ದಲಿಂಗಪ್ಪ ಪಾಟೀಲ ಹಾಗೂ ಭೀಮರಾವ್ ಮಾತನಾಡುತ್ತಿದ್ದರು. ಈ ವೇಳೆ ಇಬ್ಬರು ಪರಸ್ಪರ ಆರೋಪ-ಪ್ರತ್ಯಾತೋಪ, ಟೀಕೆ-ಟಿಪ್ಪಣಿಯಲ್ಲಿ ತೊಡಗಿದರು.


ಸಿದ್ದಲಿಂಗಪ್ಪ ಪಾಟೀಲ್ ಮಾತನಾಡುವಾಗ ಭೀಮರಾವ್ ಪಾಟೀಲ್ ಅವರ ಬಳಿ ಹೋಗಿ ಜಗಳ ಮಾಡಿ ಕೈ ಕೈ ಮಿಲಾಯಿಸಿ ಜೋರು ಧ್ವನಿಯಲ್ಲಿ ನಿಂದಿಸಿಕೊಂಡರು. ಪರಿಸ್ಥಿತಿ ಕೈಮೀರುತ್ತಿದ್ದಾಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಮಧ್ಯಪ್ರವೇಶಿಸಿ ಜಗಳ ಬಿಡಿಸಿದರು.
ಆನಂತರ ಅಲ್ಲೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ವೇದಿಕೆಯಿಂದ ಕೆಳಗಿಳಿದು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.
ಆನಂತರ ಅನಿರ್ದಿಷ್ಟ ಅವಧಿಗೆ ಸಭೆ ಮುಂದೂಡಲಾಗಿದೆ ಎಂದು ಘೋಷಿಸಲಾಯಿತು. ಯಾವುದೇ ರೀತಿಯ ಚರ್ಚೆಯಿಲ್ಲದೇ ಸಭೆ ಮೊಟಕುಗೊಂಡಿತು.
A quarterly KDP review meeting at the District Panchayat office turned chaotic when BJP MLA Dr. Siddalingappa Patil and Congress MLC Bhimrao Patil engaged in a heated verbal exchange that escalated into a physical scuffle.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm