ಬ್ರೇಕಿಂಗ್ ನ್ಯೂಸ್
06-01-26 08:23 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ರಾಜ್ಯದ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಬಳ್ಳಾರಿಯಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಯವರಿಗೆ 25 ಲಕ್ಷವನ್ನು ನಗದು ರೂಪದಲ್ಲಿ ನೀಡಿದ್ದನ್ನು ಪ್ರಶ್ನಿಸಿ ಹಿಂದು ಪರ ಸಂಘಟನೆ ಮುಖಂಡ ತೇಜಸ್ ಗೌಡ ಎಂಬವರು ಆದಾಯ ತೆರಿಗೆ ಇಲಾಖೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.
ಜನವರಿ 1ರಂದು ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಹತ್ಯೆಯಾದ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ 25 ಲಕ್ಷ ರೂಪಾಯಿ ಹಣವನ್ನು ವೈಯಕ್ತಿಕ ಪರಿಹಾರ ಎಂದು ನಗದು ರೂಪದಲ್ಲಿ ವಿತರಿಸಿದ್ದರು. 25 ಲಕ್ಷ ಹಣವನ್ನು ಬಟ್ಟೆ ಬ್ಯಾಗ್ ನಲ್ಲಿ ಮುಚ್ಚಿ ರಾಜಶೇಖರ್ ರೆಡ್ಡಿ ತಾಯಿಗೆ ನೀಡಿದ್ದರು. ಹಣ ನೀಡುವ ದೃಶ್ಯಗಳು ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಜೊತೆಗೆ ಪತ್ರಿಕೆಗಳಲ್ಲೂ 25 ಲಕ್ಷ ರೂ. ನಗದು ರೂಪದಲ್ಲೇ ನೀಡುವ ಪೋಟೋಗಳು ಪ್ರಕಟವಾಗಿವೆ.
ಆದರೇ, ನಮ್ಮ ದೇಶದಲ್ಲಿ 2017-18 ರಲ್ಲಿ ಆರ್ಬಿಐ ನಿರ್ದೇಶನ ಹಾಗೂ ಆದಾಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ, 2 ಲಕ್ಷ ರೂಪಾಯಿಗಿಂತ ಹೆಚ್ಚಿನ ನಗದು ಹಣವನ್ನು ಬೇರೆಯವರಿಗೆ ನೀಡುವುದಾಗಲೀ, ಪಡೆಯುವುದಾಗಲೀ ಮಾಡುವಂತಿಲ್ಲ. ಇದು ಆದಾಯ ತೆರಿಗೆ ಇಲಾಖೆಯ ಸೆಕ್ಷನ್ 269 ST ಸೆಕ್ಷನ್ಗೆ ವಿರುದ್ಧವಾಗಿದೆ. ಯಾರೇ ಆಗಲಿ ದಿನವೊಂದಕ್ಕೆ ಬೇರೊಬ್ಬರಿಗೆ 2 ಲಕ್ಷ ರೂ. ಹಣವನ್ನು ಮಾತ್ರ ನಗದು ರೂಪದಲ್ಲಿ ನೀಡಲು ಅವಕಾಶ ಇದೆ. 2 ಲಕ್ಷ ರೂ.ಗಿಂತ ಹೆಚ್ಚಿನ ಹಣವನ್ನು ಚೆಕ್, ಡಿ.ಡಿ. ಮೂಲಕವೇ ನೀಡಬೇಕು. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ನಗದು ರೂಪದಲ್ಲಿ ನೀಡುವಂತಿಲ್ಲ.
ಆದರೆ, ವಸತಿ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, 25 ಲಕ್ಷ ರೂ. ಹಣವನ್ನು ನಗದು ರೂಪದಲ್ಲಿ ಮೃತ ರಾಜಶೇಖರ್ ರೆಡ್ಡಿ ತಾಯಿಗೆ ನೀಡಿದ್ದಾರೆ. ಹೀಗಾಗಿ ಇದು ಐಟಿ ಇಲಾಖೆಯ ಕಾಯಿದೆ, ಸೆಕ್ಷನ್ ಗಳ ಉಲಂಘನೆ. ಇದರ ಬಗ್ಗೆ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಿ ಜಮೀರ್ ಅಹಮದ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೇಜಸ್ ಗೌಡ, ಆದಾಯ ತೆರಿಗೆ ಇಲಾಖೆಯ ಬೆಂಗಳೂರು, ಗೋವಾದ ಡೈರೆಕ್ಟರ್ ಜನರಲ್ ಅವರಿಗೆ ಲಿಖಿತ ದೂರು ನೀಡಿದ್ದಾರೆ.
ದೂರಿನ ಬಗ್ಗೆ ಐ.ಟಿ. ಇಲಾಖೆ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ನೋಟೀಸ್ ನೀಡಿ, ವಿವರಣೆ ಪಡೆಯುತ್ತಾ ಎಂಬ ಕುತೂಹಲ ಇದೆ. ದೇಶದಲ್ಲಿ ನಗದು ವ್ಯವಹಾರದ ಮೂಲಕ ಕಪ್ಪು ಹಣದ ವ್ಯವಹಾರ ಹೆಚ್ಚಾಗಿ ನಡೆಯುತ್ತಿದೆ. ಇದನ್ನು ಮಟ್ಟ ಹಾಕಲು ಹಾಗೂ ನಿಯಂತ್ರಿಸಲು ಆರ್ಬಿಐ ಹಾಗೂ ಆದಾಯ ತೆರಿಗೆ ಇಲಾಖೆಗಳು 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣದ ವ್ಯವಹಾರವನ್ನು ನಗದು ರೂಪದಲ್ಲಿ ಮಾಡುವಂತಿಲ್ಲ ಎಂದು ನಿಯಮ ರೂಪಿಸಿದೆ.
A formal complaint has been filed with the Income Tax Department against Karnataka Housing Minister Zameer Ahmed Khan after he allegedly handed over ₹25 lakh in cash to the family of slain Ballari Congress worker Rajshekhar Reddy.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm