ಬ್ರೇಕಿಂಗ್ ನ್ಯೂಸ್
07-01-26 03:07 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.7 : ಬಿಜೆಪಿ ಕಾರ್ಯಕರ್ತ ಮಹಿಳೆಯನ್ನು ಇಲ್ಲಿನ ಕೇಶ್ವಾಪುರ ಪೊಲೀಸರು ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿನ ಮಾಡಿ ಕರೆದೊಯ್ಯುವ ವೇಳೆ ಹಲ್ಲೆಗೈದು ವಿವಸ್ತ್ರಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಪೊರೇಟರ್ ಕೊಟ್ಟ ದೂರಿನ ಮೇಲೆ ಬಿಜೆಪಿ ಮಹಿಳಾ ಕಾರ್ಯಕರ್ತೆಯ ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಈ ವೇಳೆ ಬಟ್ಟೆ ಹರಿದುಕೊಂಡ ಘಟನೆ ನಡೆದಿದೆ.
ಜನವರಿ 1ರಂದು ಮತಪಟ್ಟಿ ಪರಿಷ್ಕರಣೆ ಸಂಬಂಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಬಿಜೆಪಿಯ ಸುಜಾತಾ ಹಂಡಿ ಎಂಬವರು ಅಧಿಕಾರಿಗಳ ಜೊತೆ ಸೇರಿ ಮತದಾರ ಪಟ್ಟಿಯಿಂದ ಮತದಾರರನ್ನು ತೆರವು ಮಾಡುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಆರೋಪ ಮಾಡಿದ್ದರು. ಈ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿ ಸುಜಾತಾ ವಿರುದ್ಧ ದೂರು ದಾಖಲಾಗಿತ್ತು. ಇದರಂತೆ, ಪೊಲೀಸರು ಸುಜಾತಾ ಬಂಧನಕ್ಕೆ ತೆರಳಿದ್ದು ಈ ವೇಳೆ ಪೊಲೀಸರು ಆಕೆಯನ್ನು ಬಂಧಿಸಿ ಕರೆದೊಯ್ಯುವ ವೇಳೆ ರಂಪ ಆಗಿದೆ. ಎಳೆದಾಡಿದ ವೇಳೆ ಬಟ್ಟೆ ಹರಿದಿದ್ದು ಪೊಲೀಸರ ವರ್ತನೆ ಬಗ್ಗೆ ಟೀಕೆ ಕೇಳಿಬಂದಿದೆ. ಪೊಲೀಸರು ವಾಹನಕ್ಕೆ ಹತ್ತಿಸುವ ವೇಳೆ ಎಳೆದಾಡಿದ್ದಾರೆಂದು ಕುಟುಂಬ ಸದಸ್ಯರು ಆರೋಪಿಸಿದ್ದು ಇದರ ವಿಡಿಯೋ ವೈರಲ್ ಆಗದೆ.


ಪೊಲೀಸರು ಮಹಿಳೆಯ ಬಟ್ಟೆ ಬಿಚ್ಚಿ ಥಳಿಸಿದ್ದಾರೆಂದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್, “ಪೊಲೀಸರು ಮಹಿಳೆಯ ಮೇಲೆ ಹಲ್ಲೆ ಮಾಡಿಲ್ಲ. ಬಂಧನದ ವೇಳೆ ಪ್ರತಿರೋಧ ಒಡ್ಡಿದ ಸಂತ್ರಸ್ತೆಯೇ ಸ್ವತಃ ತನ್ನ ಬಟ್ಟೆಗಳನ್ನು ಹರಿದುಕೊಂಡಿದ್ದಾಳೆ. ಅಲ್ಲದೆ, ಪೊಲೀಸರಿಗೆ ಕಚ್ಚಿ ಗಾಯಗೊಳಿಸಲು ಪ್ರಯತ್ನಿಸಿದ್ದಾಳೆ. ಈ ಬಗ್ಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಬಂಧನದ ಸಂದರ್ಭದಲ್ಲಿ ಪೊಲೀಸರ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರು ದಾಖಲಾಗಿದೆ. ಇದೀಗ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಬದಿಗಿಟ್ಟು ಕೇಶ್ವಾಪುರ ಪೊಲೀಸರೇ ಆಕೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
A controversy has erupted after allegations that Keshwapur police in Hubballi manhandled and partially stripped a BJP woman worker while taking her into custody in connection with an assault case. The arrest was made based on a complaint filed by a Congress Corporator, and during the arrest, the woman’s clothes were torn, leading to widespread criticism of the police’s behaviour.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am