ಬ್ರೇಕಿಂಗ್ ನ್ಯೂಸ್
07-01-26 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ 07 : ಅತಿ ಹೆಚ್ಚು ದಿನಗಳ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಮಾಡಿರುವ ಸಿದ್ದರಾಮಯ್ಯ ಅವರ ಸಾಧನೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದಿ.ದೇವರಾಜ ಅರಸು ಅವರೊಂದಿಗೆ ಹಾಲಿ ಸಿಎಂ ಅವರನ್ನು ಹೋಲಿಸಲಾಗದು ಎಂದಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಬಿಎಸ್ವೈ, "ಸಿದ್ದರಾಮಯ್ಯ ಅವರು ಅತಿ ಹೆಚ್ಚು ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ ಸರಿ. ಆದರೆ ದೇವರಾಜ ಅರಸು ಅವರ ಆಡಳಿತ ವೈಖರಿಯೇ ಬೇರೆ, ಇವರ ಆಡಳಿತ ವೈಖರಿಯೇ ಬೇರೆ. ಅವರ ಜೊತೆ ಇವರನ್ನು ಹೋಲಿಸಲಾಗದು" ಎಂದು ವ್ಯಾಖ್ಯಾನಿಸಿದರು.
"ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ಬಿಜೆಪಿ ವಿಶೇಷವಾದ ಗಮನ ಕೊಡಲಿದೆ. ಸಂಘಟನೆ ಬಲಪಡಿಸುವ ದೃಷ್ಟಿಯಿಂದ ಇಂದಿನಿಂದ ರಾಜ್ಯಾಧ್ಯಕ್ಷರು ಮತ್ತು ಎಲ್ಲ ಪ್ರಮುಖರು ಸೇರಿ ಪ್ರತಿ ಜಿಲ್ಲಾ ಪ್ರಮುಖರ ಸಮಾವೇಶವನ್ನು ಮಾಡುತ್ತಿದ್ದೇವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚಿಸುತ್ತಿದ್ದೇವೆ. ಈ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತರುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ವಿಶೇಷವಾದ ಗಮನ ಕೊಡಲು ತೀರ್ಮಾಸಲಾಗಿದೆ" ಎಂದರು.
"ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಈ ಸಂದರ್ಭದಲ್ಲಿ ಸಮಾವೇಶದ ಮೂಲಕ ಸಾಧನೆ ಮಾಡುವುದಾಗಿ ಹೊರಟಿರುವುದನ್ನು ಜನರು ಮೆಚ್ಚುವುದಿಲ್ಲ. ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಪಡೆಯುತ್ತಿದೆ. ಮುಂದಿನ ಚುನಾವಣೆಯಲ್ಲೂ ನಾವು ನಿಶ್ಚಿತವಾಗಿ ದೊಡ್ಡ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಬೇಕು ಎಂಬ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮ ಕಾರ್ಯಕರ್ತರೂ ತುಂಬ ಉತ್ಸಾಹದಿಂದ ಮುಂದೆ ಬಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದನ್ನು ತಾವು ಗಮನಿಸಲಿದ್ದೀರಿ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
Reacting to Chief Minister Siddaramaiah becoming the longest-serving CM of Karnataka, former Chief Minister B.S. Yediyurappa said Siddaramaiah cannot be compared with former CM Devaraj Urs.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 09:34 pm
Mangalore Correspondent
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm