ಬ್ರೇಕಿಂಗ್ ನ್ಯೂಸ್
08-01-26 09:36 pm HK News Desk ಕರ್ನಾಟಕ
ಬೆಂಗಳೂರು, ಜ.8: ಮುಖ್ಯಮಂತ್ರಿ ಪಟ್ಟಕ್ಕಾಗಿ ಕಸರತ್ತು ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಹೊಣೆ ವಹಿಸಿದೆ. ಅಸ್ಸಾಂ ಚುನಾವಣೆ ವೀಕ್ಷಕರಾಗಿ ನೇಮಕ ಮಾಡಲಾಗಿದ್ದು ಪಂಚ ರಾಜ್ಯ ಚುನಾವಣೆ ಮುಗಿಯುವ ವರೆಗೂ ಕುರ್ಚಿ ಕದನಕ್ಕೆ ಬ್ರೇಕ್ ಹಾಕಿದೆ. ಆಮೂಲಕ ಸಿಎಂ ಬದಲಾವಣೆ ಚರ್ಚೆಯನ್ನು ಚುನಾವಣೆ ಮುಗಿಯೋ ವರೆಗೂ ಮುಂದಕ್ಕೆ ಹಾಕಿದೆ.
ಮುಂದಿನ ಮಾರ್ಚ್- ಎಪ್ರಿಲ್ ನಲ್ಲಿ ಅಸ್ಸಾಂ ವಿಧಾನಸಭಾ ಚುನಾವಣೆ ನಡೆಯಲಿದ್ದು ಹಿರಿಯ ವೀಕ್ಷಕರಾಗಿ ಡಿಕೆ ಶಿವಕುಮಾರ್ ನೇಮಕಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ಸಿಗನಾಗಿ, ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ನನ್ನ ಕರ್ತವ್ಯ ಎಂದು ಹೇಳಿದ್ದಾರೆ. ಛತ್ತೀಸ್ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್, ಜಾರ್ಖಂಡ್ ಮಾಜಿ ಶಾಸಕ ಬಂಧು ಟಿರ್ಕಿ ಅವರನ್ನೂ ಅಸ್ಸಾಂ ಚುನಾವಣೆ ವೀಕ್ಷಕರಾಗಿ ಎಐಸಿಸಿ ನೇಮಿಸಿದೆ.
ಕಾಂಗ್ರೆಸ್ಸಿಗನಾಗಿ ನಾನು ಪಕ್ಷಕ್ಕಾಗಿ ಕೆಲಸ ಮಾಡಬೇಕು. ಎಐಸಿಸಿ ಪ್ರಕಟಣೆಯನ್ನು ನೋಡಿದ್ದೇನೆ. ಅವರು ಅಸ್ಸಾಂ ಅನ್ನು ನೋಡಿಕೊಳ್ಳಲು ನನಗೆ ಹೇಳಿದ್ದಾರೆ. ನಾನು ಬಹಳ ಹಿಂದೆಯೇ ಅಸ್ಸಾಂಗೆ ಹೋಗಿದ್ದೆ ಮತ್ತು ಈಗ ಅವರು ನನ್ನನ್ನು ಮತ್ತೆ ಅಲ್ಲಿಗೆ ಹೋಗಲು ಬಯಸುತ್ತಿದ್ದಾರೆ. ನಾನು ಹೋಗುತ್ತೇನೆ" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ತಿಳಿಸಿದ್ದಾರೆ. ಆಮೂಲಕ ರಾಜ್ಯದಲ್ಲಿ ಸಿಎಂ ಹುದ್ದೆಗಾಗಿ ನಡೆಸಿದ್ದ ಲಾಬಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
Amid ongoing political manoeuvring for the Chief Minister’s post in Karnataka, the Congress high command has assigned a new responsibility to Deputy Chief Minister D. K. Shivakumar, effectively putting a temporary halt to the leadership tussle. Shivakumar has been appointed as a senior observer for the upcoming Assam Assembly elections, signaling a pause in discussions over a change in leadership until the completion of the five-state elections.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm