ಬ್ರೇಕಿಂಗ್ ನ್ಯೂಸ್
14-01-26 02:54 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಆನೆ ದಂತದಿಂದ ಮಾಡಿರುವ ರಾಧೆ ಮತ್ತು ಕೃಷ್ಣರ ವಿಗ್ರಹವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಇನ್ನೊಬ್ಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬನಶಂಕರಿ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮೊಹಮ್ಮದ್ ಶಬೀರ್ ಅಹಮದ್(50) ಮತ್ತು ಬೆಂಗಳೂರಿನ ಸುಧಾಮ ನಗರ ನಿವಾಸಿ ನರೇಂದ್ರ ಶರ್ಮಾ(45) ಬಂಧಿತರು. ನರೇಂದ್ರ ಶರ್ಮಾ, ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಇದರ ಜೊತೆಗೆ ಪಾರ್ಟ್ ಟೈಮಲ್ಲಿ ರಿಯಲ್ ಎಸ್ಟೇಟ್ ಕೆಲಸವನ್ನೂ ಮಾಡಿಕೊಂಡಿದ್ದ.
120 ವರ್ಷಕ್ಕೂ ಹಳೆಯದಾದ ಆನೆ ದಂತದ ವಿಗ್ರಹಗಳು ಎನ್ನಲಾಗಿದ್ದು ಮಾರುಕಟ್ಟೆಯಲ್ಲಿ 20 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುತ್ತದೆ. ವಿಗ್ರಹವನ್ನು ಆರೋಪಿಗಳು ಮಾರಾಟ ಮಾಡುವ ಉದ್ದೇಶದಿಂದ
ಕೊಪ್ಪ ಗೇಟ್ ಸಮೀಪ ತಂದಿದ್ದರು. ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ದಾಳಿ ನಡೆಸಿದ್ದು ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿದೆ. ವಿಗ್ರಹ ಸಮೇತವಾಗಿ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
ಬಂಧಿತರಿಂದ ರಾಧಾ ಕೃಷ್ಣರ ವಿಗ್ರಹಗಳು, ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮತಿ ಪಡೆಯದೆ ಆನೆದಂತ ವಿಗ್ರಹ ಇಟ್ಟುಕೊಂಡಿದ್ದು ಮತ್ತು ಕಾನೂನು ಬಾಹಿರವಾಗಿ ವಿಗ್ರಹಗಳ ಮಾರಾಟ ಮಾಡಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ. ಆನೆ ದಂತದ ವಿಗ್ರಹಗಳನ್ನ ಬಳಿಕ ಬನ್ನೇರುಘಟ್ಟ ರಾಷ್ಟೀಯ ಉದ್ಯಾನವನಕ್ಕೆ ರವಾನಿಸಲಾಗಿದೆ.
ಪರಿಶೀಲನೆ ಬಳಿಕ ಎಷ್ಟು ವರ್ಷ ಹಳೆಯದಾದ ಆನೆದಂತ ಎಂದು ತಜ್ಞರು ವರದಿ ನೀಡಲಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jigani police have arrested a software engineer and a real estate businessman for allegedly attempting to illegally sell idols of Radha and Krishna carved from elephant ivory. The accused, identified as Mohammed Shabir Ahmed (50), a real estate entrepreneur from Banashankari, and Narendra Sharma (45), a software engineer from Sudhamanagar, were caught with the idols near Koppa Gate following a tip-off.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm