ಬ್ರೇಕಿಂಗ್ ನ್ಯೂಸ್
14-01-26 02:54 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಆನೆ ದಂತದಿಂದ ಮಾಡಿರುವ ರಾಧೆ ಮತ್ತು ಕೃಷ್ಣರ ವಿಗ್ರಹವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಇನ್ನೊಬ್ಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬನಶಂಕರಿ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮೊಹಮ್ಮದ್ ಶಬೀರ್ ಅಹಮದ್(50) ಮತ್ತು ಬೆಂಗಳೂರಿನ ಸುಧಾಮ ನಗರ ನಿವಾಸಿ ನರೇಂದ್ರ ಶರ್ಮಾ(45) ಬಂಧಿತರು. ನರೇಂದ್ರ ಶರ್ಮಾ, ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಇದರ ಜೊತೆಗೆ ಪಾರ್ಟ್ ಟೈಮಲ್ಲಿ ರಿಯಲ್ ಎಸ್ಟೇಟ್ ಕೆಲಸವನ್ನೂ ಮಾಡಿಕೊಂಡಿದ್ದ.
120 ವರ್ಷಕ್ಕೂ ಹಳೆಯದಾದ ಆನೆ ದಂತದ ವಿಗ್ರಹಗಳು ಎನ್ನಲಾಗಿದ್ದು ಮಾರುಕಟ್ಟೆಯಲ್ಲಿ 20 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುತ್ತದೆ. ವಿಗ್ರಹವನ್ನು ಆರೋಪಿಗಳು ಮಾರಾಟ ಮಾಡುವ ಉದ್ದೇಶದಿಂದ
ಕೊಪ್ಪ ಗೇಟ್ ಸಮೀಪ ತಂದಿದ್ದರು. ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ದಾಳಿ ನಡೆಸಿದ್ದು ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿದೆ. ವಿಗ್ರಹ ಸಮೇತವಾಗಿ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
ಬಂಧಿತರಿಂದ ರಾಧಾ ಕೃಷ್ಣರ ವಿಗ್ರಹಗಳು, ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮತಿ ಪಡೆಯದೆ ಆನೆದಂತ ವಿಗ್ರಹ ಇಟ್ಟುಕೊಂಡಿದ್ದು ಮತ್ತು ಕಾನೂನು ಬಾಹಿರವಾಗಿ ವಿಗ್ರಹಗಳ ಮಾರಾಟ ಮಾಡಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ. ಆನೆ ದಂತದ ವಿಗ್ರಹಗಳನ್ನ ಬಳಿಕ ಬನ್ನೇರುಘಟ್ಟ ರಾಷ್ಟೀಯ ಉದ್ಯಾನವನಕ್ಕೆ ರವಾನಿಸಲಾಗಿದೆ.
ಪರಿಶೀಲನೆ ಬಳಿಕ ಎಷ್ಟು ವರ್ಷ ಹಳೆಯದಾದ ಆನೆದಂತ ಎಂದು ತಜ್ಞರು ವರದಿ ನೀಡಲಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jigani police have arrested a software engineer and a real estate businessman for allegedly attempting to illegally sell idols of Radha and Krishna carved from elephant ivory. The accused, identified as Mohammed Shabir Ahmed (50), a real estate entrepreneur from Banashankari, and Narendra Sharma (45), a software engineer from Sudhamanagar, were caught with the idols near Koppa Gate following a tip-off.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am