ಬ್ರೇಕಿಂಗ್ ನ್ಯೂಸ್
14-01-26 02:54 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಆನೆ ದಂತದಿಂದ ಮಾಡಿರುವ ರಾಧೆ ಮತ್ತು ಕೃಷ್ಣರ ವಿಗ್ರಹವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಇನ್ನೊಬ್ಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬನಶಂಕರಿ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮೊಹಮ್ಮದ್ ಶಬೀರ್ ಅಹಮದ್(50) ಮತ್ತು ಬೆಂಗಳೂರಿನ ಸುಧಾಮ ನಗರ ನಿವಾಸಿ ನರೇಂದ್ರ ಶರ್ಮಾ(45) ಬಂಧಿತರು. ನರೇಂದ್ರ ಶರ್ಮಾ, ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಇದರ ಜೊತೆಗೆ ಪಾರ್ಟ್ ಟೈಮಲ್ಲಿ ರಿಯಲ್ ಎಸ್ಟೇಟ್ ಕೆಲಸವನ್ನೂ ಮಾಡಿಕೊಂಡಿದ್ದ.
120 ವರ್ಷಕ್ಕೂ ಹಳೆಯದಾದ ಆನೆ ದಂತದ ವಿಗ್ರಹಗಳು ಎನ್ನಲಾಗಿದ್ದು ಮಾರುಕಟ್ಟೆಯಲ್ಲಿ 20 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುತ್ತದೆ. ವಿಗ್ರಹವನ್ನು ಆರೋಪಿಗಳು ಮಾರಾಟ ಮಾಡುವ ಉದ್ದೇಶದಿಂದ
ಕೊಪ್ಪ ಗೇಟ್ ಸಮೀಪ ತಂದಿದ್ದರು. ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ದಾಳಿ ನಡೆಸಿದ್ದು ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿದೆ. ವಿಗ್ರಹ ಸಮೇತವಾಗಿ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
ಬಂಧಿತರಿಂದ ರಾಧಾ ಕೃಷ್ಣರ ವಿಗ್ರಹಗಳು, ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮತಿ ಪಡೆಯದೆ ಆನೆದಂತ ವಿಗ್ರಹ ಇಟ್ಟುಕೊಂಡಿದ್ದು ಮತ್ತು ಕಾನೂನು ಬಾಹಿರವಾಗಿ ವಿಗ್ರಹಗಳ ಮಾರಾಟ ಮಾಡಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ. ಆನೆ ದಂತದ ವಿಗ್ರಹಗಳನ್ನ ಬಳಿಕ ಬನ್ನೇರುಘಟ್ಟ ರಾಷ್ಟೀಯ ಉದ್ಯಾನವನಕ್ಕೆ ರವಾನಿಸಲಾಗಿದೆ.
ಪರಿಶೀಲನೆ ಬಳಿಕ ಎಷ್ಟು ವರ್ಷ ಹಳೆಯದಾದ ಆನೆದಂತ ಎಂದು ತಜ್ಞರು ವರದಿ ನೀಡಲಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jigani police have arrested a software engineer and a real estate businessman for allegedly attempting to illegally sell idols of Radha and Krishna carved from elephant ivory. The accused, identified as Mohammed Shabir Ahmed (50), a real estate entrepreneur from Banashankari, and Narendra Sharma (45), a software engineer from Sudhamanagar, were caught with the idols near Koppa Gate following a tip-off.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm