ಬ್ರೇಕಿಂಗ್ ನ್ಯೂಸ್
17-01-26 05:53 pm HK News Desk ಕರ್ನಾಟಕ
ದೇವನಹಳ್ಳಿ, ಜ 17 : ಹಿಟ್ ಆ್ಯಂಡ್ ರನ್ಗೆ ಮೂವರು ಯುವಕರು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಕಾಲೇಜಿನ ಮೂವರು ಯುವಕರು ದುರ್ಮರಣ ಹೊಂದಿದ್ದಾರೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಯುವಕರು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಬಂದು, ಪಕ್ಕದ ರಸ್ತೆಯಲ್ಲಿ ಎದುರಿನಿಂದ ಬಂದ ಟಿಪ್ಪರ್ನಡಿ ಸಿಲುಕಿದೆ. ಅಪಘಾತದ ರಭಸಕ್ಕೆ ಮೂವರು ಯುವಕರ ದೇಹಗಳು ಛಿದ್ರಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಯುವಕರು ಚಿಕ್ಕಜಾಲ ಮೂಲದ ತೌಸಿಫ್ ಸೇರಿದಂತೆ ಮತ್ತಿಬ್ಬರು ಎಂದು ತಿಳಿದುಬಂದಿದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ತೌಸಿಫ್ ತನ್ನ ಇಬ್ಬರು ಸ್ನೇಹಿತರನ್ನು ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನೆ ನಂತರ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ:
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನ ಸ್ಥಳೀಯ ಆಸ್ಪತ್ರೆ ರವಾನೆ ಮಾಡಿದ್ದಾರೆ. ಭೀಕರ ಅಪಘಾತ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.
Three college students lost their lives in a gruesome road accident near Agalakote on the Devanahalli–Boodigere Road on January 17. The bike they were riding reportedly lost control, crossed the divider, and collided with an oncoming tipper lorry. The impact was so severe that all three died on the spot.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am