ಬ್ರೇಕಿಂಗ್ ನ್ಯೂಸ್
17-01-26 08:02 pm HK News Desk ಕರ್ನಾಟಕ
ಬಳ್ಳಾರಿ: ಜ.1 : ರಂದು ಬಳ್ಳಾರಿಯಲ್ಲಿನ ಶಾಸಕ ಜನಾರ್ಧನರೆಡ್ಡಿ ಮನೆ ಬಳಿ ನಡೆದ ಫೈರಿಂಗ್ ಘಟನೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಕೈ ಶಾಸಕ ಭರತ್ ರೆಡ್ಡಿ ಮತ್ತವರ ಆಪ್ತ ಸತೀಶ್ ರೆಡ್ಡಿ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಬಳ್ಳಾರಿಯಲ್ಲಿಂದು ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸುವ ಮೂಲಕ ಬಲ ಪ್ರದರ್ಶನ ನಡೆಸಿತು.
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಸರ್ಕಾರ ಇದ್ದಾಗಲೇ ವಾಲ್ಮೀಕಿ ಜಯಂತಿಗೆ ರಜೆ ಘೋಷಣೆ ಮಾಡಿದ್ದು. ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಮೀಸಲಾತಿ ಹೆಚ್ಚಳ ಮಾಡಿದ್ದು ಕೂಡಾ ಬಿಜೆಪಿ. ಮುಖ್ಯ ಮಂತ್ರಿ ಸಿದ್ದರಾಮಯ್ಯನವರೇ ವಾಲ್ಮೀಕಿ ಸಮುದಾಯಕ್ಕೆ ನಿಮ್ಮ ಸರ್ಕಾರದ ಕೊಡುಗೆ ಏನು ಎಂದು ಪ್ರಶ್ನಿಸಿದರು.



ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗದ ವಿರೋಧಿಯಾಗಿದೆ. ರಾಜ್ಯದಲ್ಲಿನ ಪೊಲೀಸ್ ವ್ಯವಸ್ಥ ಕುಸಿದಿದೆ. ಠಾಣೆಗಳು ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿವೆ ಎಂದು ಆರೋಪಿಸಿದ ವಿಜಯೇಂದ್ರ, ಬಳ್ಳಾರಿ ಘಟನೆ ಖಂಡಿಸಿ ಶ್ರೀ ರಾಮುಲು ಮತ್ತು ಜನಾರ್ಧನರೆಡ್ಡಿ ಅವರು ಬಳ್ಳಾರಿಯಿಂದ ಬೆಂಗಳೂರಿಗೆಪಾದಯಾತ್ರೆ ಮಾಡಲು ಬಯಸಿದ್ದಾರೆ. ಈ ವಿಷಯವನ್ನು ಕೇಂದ್ರದ ನಾಯಕರಿಗೆ ತಿಳಿಸಿ ಮುಂದಿನ ದಿನದಲ್ಲಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ರಾಜ್ಯದಲ್ಲಿ ಗೃಹ ಇಲಾಖೆ ಸಚಿವರು ಕೇವಲ ವಿಧಾನ ಸಭೆಯಲ್ಲಿ ಉತ್ತರ ನೀಡಲು ಮಾತ್ರ ಇದ್ದಾರೆ. ಅವರಿಂದ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗುಂಡು ಹಾರಿಸಿದ್ದು ಕಾಂಗ್ರೆಸ್ ನವರೆಂದು ಅವರ ಕಡೆಯವರ ಬಂಧನ ಇಲ್ಲ. ಅದೇನಾದ್ರೂ ಬಿಜೆಪಿಯವರ ಕಡೆಯಿಂದ ಆಗಿದ್ದರೆ ಈ ವೇಳೆಗೆ ನೂರಾರು ಜನರ ಬಂಧನವಾಗುತ್ತಿತ್ತು. ಕಾಂಗ್ರೆಸ್ ನಿಂದ ನಮಗ ನ್ಯಾಯದ ನಿರೀಕ್ಷೆ ಇಲ್ಲ. ಪೊಲೀಸರೂ ನ್ಯಾಯ ಒದಗಿಸಲು ವಿಫಲರಾಗಿದ್ದಾರೆ. ಬಳ್ಳಾರಿಯಲ್ಲಿ ಅಭಿವೃದ್ಧಿ ಇಲ್ಲ. ಬಳ್ಳಾರಿಯನ್ನೇ ಸುಡುತ್ತೇನೆ ಎಂದ ಶಾಸಕನಿಗೆ ಡಿಸಿಎಂ ಡಿಕೆಶಿ ಪೂರ್ತಿ ಬೆಂಬಲ ಎನ್ನುತ್ತಾರೆ. ಇಂತಹವರಿಗೆ ಸರಿಯಾದ ಬುದ್ದಿ ಕಲಿಸಿ ಎಂದರು.
ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ಈ ಸರ್ಕಾರ ಗೂಂಡಾವರ್ತನೆಯಿಂದ ಕೂಡಿದೆ. ಇದರ ಮುಖವಾಡ ಜನತೆ ಮುಂದೆ ಕಳಚಲಿದೆ. ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ತನ್ನ ತಪ್ಪು ತಿಳಿದುಕೊಳ್ಳದೆ ಸರ್ಕಾರ ದುಂಡಾವರ್ತೆನೆ ಮಾಡುತ್ತಿದೆ. ವಾಲ್ಮೀಕಿ ಹೆಸರಲ್ಲಿ ಗಲಾಟೆ ಏಕೆ, ಈ ವಿಷಯದಲ್ಲಿ ಜನಾರ್ಧನರೆಡ್ಡಿ ಕೊಲೆ ಸಂಚು ಮಾಡಿದ್ದು ಏಕೆ ಎಂದು ಪ್ರಶ್ನಿಸಿದರು.
ಸಂಸದ ಬಸವರಾಜ್ ಬೊಮ್ಮಾಯಿ ಮಾತನಾಡಿ, ಬಳ್ಳಾರಿಯಲ್ಲಿ ರಾಮುಲು ವೇಗ ಮತ್ತು ಜನಾರ್ಧನರೆಡ್ಡಿ ರೆಡ್ಡಿ ಶಕ್ತಿ ಒಂದಾಗಿರುವುದನ್ನು ಸಹಿಸದೇ ಫೈರಿಂಗ್ ಗಲಾಟೆ ನಡೆದಿದೆ. ರಾಜ್ಯದಲ್ಲಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೂ ಭದ್ರತೆ ಇಲ್ಲದಂತಾಗಿದೆ. ಕಾರ್ಯಕರ್ತರೇ ಕಾಂಗ್ರೆಸ್ ವಿರುದ್ದ ನಾವು ಸಡ್ಡು ಹೊಡೆದು ಸಂಘರ್ಷಕ್ಕೆ ಇಳಿಯಬೇಕಿದೆ ಎಂದು ಕರೆ ನೀಡಿದರು.
The BJP staged a massive protest in Ballari demanding a CBI investigation into the firing incident near MLA Janardhan Reddy’s residence and the arrest of Congress MLA Bharat Reddy and his associate. Senior BJP leaders accused the Congress government of lawlessness, political bias, and failing to maintain law and order, warning that the situation in Ballari and across Karnataka has deteriorated sharply.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm