ಬ್ರೇಕಿಂಗ್ ನ್ಯೂಸ್
19-01-26 03:08 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ವಿವೇಕನಗರ ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಶಾಲೆಗೆ ಮಗನೊಂದಿಗೆ ತೆರಳುತ್ತಿದ್ದ ತಾಯಿ ಸಂಗೀತಾ (37) ಮತ್ತು ಆಕೆಯ ಎಂಟು ವರ್ಷದ ಮಗ ಪಾರ್ಥ, ಖಾಸಗಿ ಕಾಲೇಜು ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶ ಮೂಲದ ಸಂಗೀತಾ, ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಇಬ್ಬರು ಮಕ್ಕಳೂ ಅದೇ ಶಾಲೆಯಲ್ಲಿ ಓದುತ್ತಿದ್ದರು. ಪತಿ ಪ್ರಸಾದ್ ಊರಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾರೆ. ಬೆಳಿಗ್ಗೆ ಎಂದಿನಂತೆ ಮಗ ಪಾರ್ಥನೊಂದಿಗೆ ಶಾಲೆಗೆ ಹೊರಟಿದ್ದಾಗ, ರಸ್ತೆ ದಾಟುವ ವೇಳೆ ಕಾಲೇಜು ಬಸ್ ಅವರ ಮೇಲೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಈ ಪರಿಣಾಮ ತಾಯಿ-ಮಗ ಇಬ್ಬರೂ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅಶೋಕ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೋರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದುರದೃಷ್ಟವಶಾತ್, ಅಪಘಾತ ಎಸಗಿದ ಬಸ್ ಚಾಲಕ ಸುನೀಲ್, ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ತಲೆ ಮರೆಸಿಕೊಂಡಿರುವ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
A woman and her eight-year-old son were killed on the spot after a speeding private college bus hit them while they were crossing the road in Bengaluru’s Viveknagar area. The accident occurred as the mother was taking her child to school. The bus driver fled the scene, and police have launched a search to trace him.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am