ಬ್ರೇಕಿಂಗ್ ನ್ಯೂಸ್
19-01-26 03:33 pm HK News Desk ಕರ್ನಾಟಕ
ಗದಗ, ಜ.19 : ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಇಲಾಖೆ ಉತ್ಖನನ ನಡೆಸುತ್ತಿದ್ದು ಇದೇ ವೇಳೆ, ಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಯೊಬ್ಬರು 'ಇಲ್ಲಿ ಸಾವಿರ ಕೆಜಿ ಚಿನ್ನದ ಶಿವಲಿಂಗವಿದೆ' ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಅವರ ವಂಶಸ್ಥನೆಂದು ಹೇಳಿಕೊಂಡು ಬಂದಿದ್ದ ಸ್ವಾಮೀಜಿ ಮಾತು ಜನರಲ್ಲಿ ಕುತೂಹಲ ಮೂಡಿಸಿದೆ.
ಉತ್ಖನನ ನಡೆಯುವ ಸ್ಥಳಕ್ಕೆ ಬಂದ ವ್ಯಕ್ತಿ ಒಂದೇ ಕಾಲಿನಲ್ಲಿ ವಿಚಿತ್ರವಾಗಿ ವರ್ತಿಸಲು ಶುರು ಮಾಡಿದ್ದಾರೆ. ಉತ್ಖನನ ಮಾಡುತ್ತಿರುವ ಜಾಗದಲ್ಲಿ ಏನೂ ಇಲ್ಲ, ಅದರ ಪಕ್ಕದಲ್ಲೇ ಸಾವಿರ ಕೆಜಿ ತೂಕದ ಚಿನ್ನದ ಶಿವಲಿಂಗ ಮತ್ತು ಕ್ವಿಂಟಲ್ ತೂಕದ ಚಿನ್ನದ ದೇವಿಯ ಮೂರ್ತಿ ಇದೆ' ಎಂದು ಹೇಳಿಕೆ ನೀಡಿದ್ದಾರೆ.
ಅಷ್ಟಕ್ಕೇ ನಿಲ್ಲದ ಈ ವ್ಯಕ್ತಿ, 'ಒಂದು ವೇಳೆ ಆ ಮೂರ್ತಿಯನ್ನು ಸ್ಥಳಾಂತರಿಸಿದರೆ ಜಗತ್ತಿನಲ್ಲಿ ಮಳೆಯೇ ಆಗುವುದಿಲ್ಲ' ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಈ ವ್ಯಕ್ತಿ ಪಾನಮತ್ತನಾಗಿರುವುದು ಕಂಡಿದ್ದು ಗ್ರಾಮಸ್ಥರು ಬಳಿಕ ತೀವ್ರ ತರಾಟೆಗೆ ತೆಗೆದುಕೊಂಡು ಸ್ವಾಮಿಯನ್ನು ಓಡಿಸಿದ್ದಾರೆ.
ಶಿಲಾಯುಗದ ಆಯುಧ ಪತ್ತೆ
ಸೋಮವಾರ 4ನೇ ದಿನದ ಉತ್ಖನನ ಕಾರ್ಯ ನಡೆದಿದ್ದು, ಲಕ್ಕುಂಡಿಯ ಬಗ್ಗೆ ನಾನಾ ರೀತಿಯ ವಿಸ್ಮಯದ ಮಾತುಗಳು ಕೇಳಿಬರುತ್ತಿವೆ. ಈವರೆಗಿನ ಕಾರ್ಯಾಚರಣೆಯಲ್ಲಿ ಶಿಲಾಯುಗದ ಕಾಲದಲ್ಲಿ ಬಳಕೆಯಾಗುತ್ತಿದ್ದ ಕಲ್ಲಿನ ಆಯುಧವೊಂದು ಪತ್ತೆಯಾಗಿದೆ. ಈ ವಸ್ತು ಅಂಡಾಕಾರದಲ್ಲಿದ್ದು, ಒಂದು ಭಾಗವು ಮೊನಚಾಗಿದೆ. ಇದು ಅಂದಿನ ಕಾಲದ ಮಾನವರು ಬೇಟೆ ಅಥವಾ ದೈನಂದಿನ ಕೆಲಸಕ್ಕೆ ಬಳಸುತ್ತಿದ್ದ ಆಯುಧವಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಗಂಟೆಯೊಂದು ಲಭ್ಯವಾಗಿದೆ. ಭಾನುವಾರ ಚಿಕ್ಕದೊಂದು ಶಿವಲಿಂಗ, ಶಿವನ ವಿಗ್ರಹದ ಕಳಶದ ಶಿಲಾ ಭಾಗವೊಂದು ಫತ್ತೆಯಾಗಿತ್ತು. ಇಡೀ ಗ್ರಾಮದಲ್ಲಿ ಎರಡು ತಿಂಗಳ ಕಾಲ ಉತ್ಖನನ ನಡೆಸಲು ಪ್ರಾಚ್ಯವಸ್ತು ಇಲಾಖೆ ಮುಂದಾಗಿದ್ದು ಜನರ ಕುತೂಹಲ ಇಮ್ಮಡಿಯಾಗಿದೆ.
ಎರಡು ವಾರಗಳ ಹಿಂದೆ ಲಕ್ಕುಂಡಿ ಗ್ರಾಮದಲ್ಲಿ ಮನೆಯನ್ನು ನಿರ್ಮಿಸಲು ಭೂಮಿ ಅಗೆಯುವಾಗ ಬಂಗಾರದ ನಿಧಿ ಪತ್ತೆಯಾಗಿತ್ತು. ಈ ನಿಧಿಯನ್ನು ಕುಟುಂಬಸ್ಥರು ಸರ್ಕಾರಕ್ಕೆ ಒಪ್ಪಿಸಿದ್ದರು. ಚಿನ್ನದ ನಿಧಿಯ ಮೌಲ್ಯ 65 ಲಕ್ಷ ರೂ. ಎಂದು ತಿಳಿಸಲಾಗಿತ್ತು. ಇದರಲ್ಲಿ ಶೇ.20ರಷ್ಟು ಹಣವನ್ನು ಅಂದರೆ 13 ಲಕ್ಷ ರೂ. ನಷ್ಟು ಹಣವನ್ನು ಆ ಕುಟುಂಬಕ್ಕೆ ನೀಡಲಾಗಿತ್ತು.
A self-styled swami created a stir at the ongoing Archaeological Department excavation in Lakkundi, Gadag district, claiming the presence of a 1,000-kg gold Shivling and a gold goddess idol nearby. Villagers later chased him away after noticing erratic behavior. Meanwhile, archaeologists have uncovered Stone Age tools and artifacts, adding to the growing curiosity around the historic site, especially after a gold treasure was found in the village weeks earlier.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm