ಬ್ರೇಕಿಂಗ್ ನ್ಯೂಸ್
19-01-26 03:33 pm HK News Desk ಕರ್ನಾಟಕ
ಗದಗ, ಜ.19 : ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಇಲಾಖೆ ಉತ್ಖನನ ನಡೆಸುತ್ತಿದ್ದು ಇದೇ ವೇಳೆ, ಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಯೊಬ್ಬರು 'ಇಲ್ಲಿ ಸಾವಿರ ಕೆಜಿ ಚಿನ್ನದ ಶಿವಲಿಂಗವಿದೆ' ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಅವರ ವಂಶಸ್ಥನೆಂದು ಹೇಳಿಕೊಂಡು ಬಂದಿದ್ದ ಸ್ವಾಮೀಜಿ ಮಾತು ಜನರಲ್ಲಿ ಕುತೂಹಲ ಮೂಡಿಸಿದೆ.
ಉತ್ಖನನ ನಡೆಯುವ ಸ್ಥಳಕ್ಕೆ ಬಂದ ವ್ಯಕ್ತಿ ಒಂದೇ ಕಾಲಿನಲ್ಲಿ ವಿಚಿತ್ರವಾಗಿ ವರ್ತಿಸಲು ಶುರು ಮಾಡಿದ್ದಾರೆ. ಉತ್ಖನನ ಮಾಡುತ್ತಿರುವ ಜಾಗದಲ್ಲಿ ಏನೂ ಇಲ್ಲ, ಅದರ ಪಕ್ಕದಲ್ಲೇ ಸಾವಿರ ಕೆಜಿ ತೂಕದ ಚಿನ್ನದ ಶಿವಲಿಂಗ ಮತ್ತು ಕ್ವಿಂಟಲ್ ತೂಕದ ಚಿನ್ನದ ದೇವಿಯ ಮೂರ್ತಿ ಇದೆ' ಎಂದು ಹೇಳಿಕೆ ನೀಡಿದ್ದಾರೆ.
ಅಷ್ಟಕ್ಕೇ ನಿಲ್ಲದ ಈ ವ್ಯಕ್ತಿ, 'ಒಂದು ವೇಳೆ ಆ ಮೂರ್ತಿಯನ್ನು ಸ್ಥಳಾಂತರಿಸಿದರೆ ಜಗತ್ತಿನಲ್ಲಿ ಮಳೆಯೇ ಆಗುವುದಿಲ್ಲ' ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಈ ವ್ಯಕ್ತಿ ಪಾನಮತ್ತನಾಗಿರುವುದು ಕಂಡಿದ್ದು ಗ್ರಾಮಸ್ಥರು ಬಳಿಕ ತೀವ್ರ ತರಾಟೆಗೆ ತೆಗೆದುಕೊಂಡು ಸ್ವಾಮಿಯನ್ನು ಓಡಿಸಿದ್ದಾರೆ.
ಶಿಲಾಯುಗದ ಆಯುಧ ಪತ್ತೆ
ಸೋಮವಾರ 4ನೇ ದಿನದ ಉತ್ಖನನ ಕಾರ್ಯ ನಡೆದಿದ್ದು, ಲಕ್ಕುಂಡಿಯ ಬಗ್ಗೆ ನಾನಾ ರೀತಿಯ ವಿಸ್ಮಯದ ಮಾತುಗಳು ಕೇಳಿಬರುತ್ತಿವೆ. ಈವರೆಗಿನ ಕಾರ್ಯಾಚರಣೆಯಲ್ಲಿ ಶಿಲಾಯುಗದ ಕಾಲದಲ್ಲಿ ಬಳಕೆಯಾಗುತ್ತಿದ್ದ ಕಲ್ಲಿನ ಆಯುಧವೊಂದು ಪತ್ತೆಯಾಗಿದೆ. ಈ ವಸ್ತು ಅಂಡಾಕಾರದಲ್ಲಿದ್ದು, ಒಂದು ಭಾಗವು ಮೊನಚಾಗಿದೆ. ಇದು ಅಂದಿನ ಕಾಲದ ಮಾನವರು ಬೇಟೆ ಅಥವಾ ದೈನಂದಿನ ಕೆಲಸಕ್ಕೆ ಬಳಸುತ್ತಿದ್ದ ಆಯುಧವಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಗಂಟೆಯೊಂದು ಲಭ್ಯವಾಗಿದೆ. ಭಾನುವಾರ ಚಿಕ್ಕದೊಂದು ಶಿವಲಿಂಗ, ಶಿವನ ವಿಗ್ರಹದ ಕಳಶದ ಶಿಲಾ ಭಾಗವೊಂದು ಫತ್ತೆಯಾಗಿತ್ತು. ಇಡೀ ಗ್ರಾಮದಲ್ಲಿ ಎರಡು ತಿಂಗಳ ಕಾಲ ಉತ್ಖನನ ನಡೆಸಲು ಪ್ರಾಚ್ಯವಸ್ತು ಇಲಾಖೆ ಮುಂದಾಗಿದ್ದು ಜನರ ಕುತೂಹಲ ಇಮ್ಮಡಿಯಾಗಿದೆ.
ಎರಡು ವಾರಗಳ ಹಿಂದೆ ಲಕ್ಕುಂಡಿ ಗ್ರಾಮದಲ್ಲಿ ಮನೆಯನ್ನು ನಿರ್ಮಿಸಲು ಭೂಮಿ ಅಗೆಯುವಾಗ ಬಂಗಾರದ ನಿಧಿ ಪತ್ತೆಯಾಗಿತ್ತು. ಈ ನಿಧಿಯನ್ನು ಕುಟುಂಬಸ್ಥರು ಸರ್ಕಾರಕ್ಕೆ ಒಪ್ಪಿಸಿದ್ದರು. ಚಿನ್ನದ ನಿಧಿಯ ಮೌಲ್ಯ 65 ಲಕ್ಷ ರೂ. ಎಂದು ತಿಳಿಸಲಾಗಿತ್ತು. ಇದರಲ್ಲಿ ಶೇ.20ರಷ್ಟು ಹಣವನ್ನು ಅಂದರೆ 13 ಲಕ್ಷ ರೂ. ನಷ್ಟು ಹಣವನ್ನು ಆ ಕುಟುಂಬಕ್ಕೆ ನೀಡಲಾಗಿತ್ತು.
A self-styled swami created a stir at the ongoing Archaeological Department excavation in Lakkundi, Gadag district, claiming the presence of a 1,000-kg gold Shivling and a gold goddess idol nearby. Villagers later chased him away after noticing erratic behavior. Meanwhile, archaeologists have uncovered Stone Age tools and artifacts, adding to the growing curiosity around the historic site, especially after a gold treasure was found in the village weeks earlier.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am