ಬ್ರೇಕಿಂಗ್ ನ್ಯೂಸ್
19-01-26 08:34 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. "ಎಷ್ಟೇ ದೊಡ್ಡ ಅಧಿಕಾರಿಯಾದರೂ ಬಿಡುವುದಿಲ್ಲ. ತನಿಖೆ ಮಾಡಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆ " ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ, "ನನಗೆ ಮುಂಜಾನೆ ಈ ವಿಚಾರ ಗೊತ್ತಾಗಿದೆ. ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಎಷ್ಟೇ ಎತ್ತರ ವ್ಯಕ್ತಿಯಾದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಡ್ಡಾಯವಾಗಿ ಕ್ರಮ ಕೈಗೊಳ್ಳುತ್ತೇವೆ " ಎಂದು ಸ್ಪಷ್ಟಪಡಿಸಿದರು.
ರಾಮಚಂದ್ರರಾವ್ ರಾಸಲೀಲೆ ಪ್ರಕರಣದ ಕುರಿತು ಬೆಳಗಾವಿಯ ನಂದಗಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಕಾನೂನು ರೀತಿ ಕ್ರಮ ಆಗಲಿ. ತಪ್ಪು ಮಾಡಿದ್ರೆ ಖಂಡಿತವಾಗಿ ಶಿಕ್ಷೆ ಕೊಡುತ್ತೇವೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ರೆ ಎಷ್ಟೇ ದೊಡ್ಡ ಅಧಿಕಾರಿ ಆದ್ರೂ ಕ್ರಮವಾಗುತ್ತೆ ಎಂದರು.
ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆ ಸರಸವಾಡುವಾಗ ವಿಡಿಯೋ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ಬೆತ್ತಲಾಗಿ ವಿಕೃತಿ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ
ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ 'ಕಾಮ'ಕಾಂಡದ ಸರಣಿ ವಿಡಿಯೋಗಳು ಈಗ ಹೊರಬರುತ್ತಿವೆ.
Karnataka Chief Minister Siddaramaiah has assured strict disciplinary action against IPS officer Ramachandra Rao over a controversial video allegedly showing him behaving indecently in his office. Speaking to the media in Belagavi, the CM said no one is above the law, regardless of rank, and a thorough inquiry will be conducted.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm