ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್ಟಿದ್ದ ಭಕ್ತನ ಮೇಲೆ ಅಟ್ಯಾಕ್, ಯುವಕ ಬಲಿ, ಒಂದು ವಾರದಿಂದ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡರೂ ತಲೆಕೆಡಿಸಿಕೊಳ್ಳದ ಅರಣ್ಯ ಇಲಾಖೆ! ! 

21-01-26 01:31 pm       HK News Desk   ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟಕ್ಕೆ ಪಾದಯಾತ್ರೆಗೆ ಹೊರಟ್ಟಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಯುವಕ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರವೀಣ್ ಎಂದು ಗುರುತಿಸಲಾಗಿದ್ದು, ಮಂಡ್ಯ ತಾಲೂಕಿನ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.

ಚಾಮರಾಜನಗರ, ಜ 21 : ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟಕ್ಕೆ ಪಾದಯಾತ್ರೆಗೆ ಹೊರಟ್ಟಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಯುವಕ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರವೀಣ್ ಎಂದು ಗುರುತಿಸಲಾಗಿದ್ದು, ಮಂಡ್ಯ ತಾಲೂಕಿನ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದಿಂದ ಪಾದಯಾತ್ರೆಗೆ ಹೊರಟ್ಟಿದ್ದರು. ಇಂದು ಬೆಳಗಿನ ಜಾವ ಪಾದಯಾತ್ರೆ ಹೋಗುವ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಈ ವೇಳೆ ಚಿರತೆ ನೊಡ್ತಿದ್ದಂತೆ ಸ್ಥಳದಿಂದ ಸ್ನೇಹಿತರು ಓಡಿ ಹೋಗಿ ಜೀವ ರಕ್ಷಿಸಿಕೊಂಡಿದ್ದಾರೆ. ಆದರೆ ದಾಳಿಯಲ್ಲಿ ಸಿಕ್ಕ ಪ್ರವೀಣ್ ನನ್ನ ಚಿರತೆ ಎಳೆದುಕೊಂಡು ಹೋಗಿದೆ.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಈ ವೇಳೆ ಚಿರತೆ ಇರೋದನ್ನು ಅರಣ್ಯ ಇಲಾಖೆ ಗುರುತಿಸಿದ್ದಾರೆ. ಸದ್ಯ ಯುವಕನ ಶವದ ಬಳಿಯೇ ಚಿರತೆ ಇರೋದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ "ಚಿರತೆ ಟಾಸ್ಕ್ ಫೋರ್ಸ್" ಕರೆಸಿ ಕಂದಕದಲ್ಲಿದ್ದ ಮೃತದೇಹವನ್ನು ಹೊರಕ್ಕೆ ಕರೆತಂದಿದ್ದಾರೆ. ಸ್ಥಳದಲ್ಲಿ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ.

ಕಳೆದ ಒಂದು ವಾರದಿಂದ ಸತತವಾಗಿ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡು ಕುಳಿತಿರುತ್ತಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿತ್ತು. ಆದರೂ ಅರಣ್ಯ ಇಲಾಖೆ ಮಾತ್ರ ತಲೆಕೆಡಿಸಿಕೊಂಡಿಲ್ಲ. ಚಿರತೆ ಒಬ್ಬನನ್ನ ಬಳಿ ಪಡೆದ ನಂತರ ಅರಣ್ಯ ಅಧಿಕಾರಿಗಳು, ಸಿಬಂದಿ ಓಡಿ ಹೋಗಿ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿದ್ದಾರೆ.

A tragic leopard attack claimed the life of a young devotee in Chamarajanagar district early Tuesday morning. The incident occurred near Talabetta on the Male Mahadeshwara Hills, where a group of devotees had set out on a foot pilgrimage.