ಬ್ರೇಕಿಂಗ್ ನ್ಯೂಸ್
27-01-26 06:31 pm HK News Desk ಕರ್ನಾಟಕ
ಬೆಳಗಾವಿ, ಜ.27 : 400 ಕೋಟಿ ದರೋಡೆ ಪ್ರಕರಣದಲ್ಲಿ ನಾನಾ ರೀತಿಯ ಗೋಜಲುಗಳು ಎದುರಾಗಿದ್ದು ಕಾಂಗ್ರೆಸ್- ಬಿಜೆಪಿ ನಾಯಕರು ಕೆಸರೆರಚಾಟಕ್ಕೆ ತೊಡಗಿದ್ದಾರೆ. ಇದೇ ವೇಳೆ, ಈ ಹಣವು ಗುಜರಾತ್ ಮೂಲದ ರಾಜಕಾರಣಿಗೆ ಸೇರಿದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು ಸಚಿವ ಪ್ರಿಯಾಂಕ ಖರ್ಗೆ, ಅಮಿತ್ ಷಾ - ಮೋದಿ ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ದರೋಡೆ ಹಣಕ್ಕೆ ಸಂಬಂಧಿಸಿ ಆರೋಪಿ ಜಯೇಶ್ ಎಂಬಾತನ ಜೊತೆ ಮಹಾರಾಷ್ಟ್ರದ ಉದ್ಯಮಿ ಕಿಶೋರ್ ಸಾಳ್ವೆ ಮಾತನಾಡಿದ್ದಾನೆ ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಅದರಲ್ಲಿ, ನನ್ನ ಮತ್ತು ವಿರಾಟ್ಗೆ ಪರಿಚಯವಿದ್ದ ವ್ಯಕ್ತಿ ಮಧ್ಯಸ್ಥಿಕೆ ವಹಿಸಿದ್ದಾರೆ. ಈ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿ ಗುಜರಾತ್ನ ದೊಡ್ಡ ರಾಜಕಾರಣಿ ಎಂದು ಆಡಿಯೋದಲ್ಲಿದೆ. ಹೀಗಾಗಿ ದರೋಡೆಯಾಗಿರುವ ಹಣ ಗುಜರಾತ್ ರಾಜಕಾಣಿಗೆ ಸೇರಿದ್ದಾ ಎಂಬ ಪ್ರಶ್ನೆ ಮೂಡಿದೆ.
ಆಡಿಯೋ ಪ್ರಕಾರ ಕಿಶೋರ್ ಹಣ ಕಳುಹಿಸುತ್ತಿದ್ದ. ಆದರೆ, ಗೋವಾದಲ್ಲಿ ಹಣ ಕೊಟ್ಟಿದ್ಯಾರು? ಆ ದುಡ್ಡು ಕಿಶೋರ್ನದ್ದೇನಾ? ಗುಜರಾತ್ ರಾಜಕಾರಣಿಗೆ ಹೋಗಿತ್ತಾ? ಅಥವಾ ಗುಜರಾತ್ ರಾಜಕಾರಣಿಯೇ ನೋಟು ಬದಲಾವಣೆಗೆ ಕೊಟ್ಟಿದ್ದರಾ ಎಂಬುದು ನಿಗೂಢವಾಗಿದೆ. ಗುಜರಾತ್ ರಾಜಕಾರಣಿ ಕೂಡ ಬೇರೆ ಹಣದ ವ್ಯವಸ್ಥೆ ಮಾಡಿ, ಈ ಬಗ್ಗೆ ಕಾಳಜಿ ವಹಿಸಿದ್ದಾರೆ ಎಂಬುದು ಆಡಿಯೋದಲ್ಲಿದೆ.
ಅಮಾನ್ಯಗೊಂಡ ಎರಡು ಸಾವಿರ ಮೌಲ್ಯದ ನೋಟುಗಳ ಕಂತೆ ಇತ್ತು ಎಂಬ ಮಾಹಿತಿಯಿದ್ದರೆ, ಆ ಹಣ ಯಾರದ್ದು ಮತ್ತು ಯಾರ ಜೇಬು ಸೇರಿದೆ ಎಂಬುದನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪ್ರಕರಣಲ್ಲಿ ಗೊಂದಲವಿದೆ. ನಮ್ಮ ಪೊಲೀಸರು ಮಹಾರಾಷ್ಟ್ರ ಪೊಲೀಸರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಮೊದಲಿಗೆ ಕಿಡ್ನಾಪ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು 400 ಕೋಟಿ ರೂ. ಮೂಲದ ಬೆನ್ನತ್ತಿದ್ದಾರೆ. ದರೋಡೆ ಪ್ರಕರಣದ ಬಗ್ಗೆ ಕರ್ನಾಟಕದಲ್ಲಿ ಎಫ್ಐಆರ್ ದಾಖಲಾಗಿಲ್ಲ. ಆದರೂ ಮಹಾರಾಷ್ಟ್ರ, ಗೋವಾ ಪೊಲೀಸರ ಜೊತೆಗೆ ತನಿಖೆಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಬಗ್ಗೆ ಪ್ರಶ್ನೆ ಮಾಡಿರುವ ಪ್ರಿಯಾಂಕ ಖರ್ಗೆ, ಮೋದಿಯವರು ಜೆನ್ ಜೀ, ಭಜನ್ ಸಂಘದ ಬಗ್ಗೆ ಮಾತನಾಡುತ್ತಾರೆ. 400 ಕೋಟಿಯಿದ್ದ ಟ್ರಕ್ ನಾಪತ್ತೆಯಾದ ಬಗ್ಗೆ ಮಾಹಿತಿ ಇಲ್ವಾ.. ಕೇಂದ್ರ ಗೃಹ ಸಚಿವ ಅಮಿತ್ ಷಾ ನಿದ್ದೆ ಮಾಡುತ್ತಿದ್ದಾರೆಯೇ..? ಎಲ್ಲಿದ್ದಾರೆ ಅವರು? ಮೂರು ರಾಜ್ಯಗಳಿಗೆ ಸಂಬಂಧಿಸಿ ದರೋಡೆಯಾಗಿದ್ದು ಯಾಕೆ ಕೇಂದ್ರೀಯ ಏಜನ್ಸಿಗಳು ಮಾತಾಡ್ತಿಲ್ಲ. ಅಮಾನ್ಯ ನೋಟುಗಳನ್ನು ಈಗಲೂ ಪ್ರಿಂಟ್ ಮಾಡುತ್ತಿದ್ದಾರೆಯೇ..? ಹೇಗೆ ಅಷ್ಟೊಂದು ಪ್ರಮಾಣದಲ್ಲಿ ಎರಡು ಸಾವಿರದ ನೋಟುಗಳು ಬಂದವು. ಕೇಂದ್ರ ತನಿಖಾ ಏಜನ್ಸಿಗಳು ವಿಪಕ್ಷ ನಾಯಕರನ್ನು ಮಾತ್ರ ತನಿಖೆ ಮಾಡೋದಾ ಎಂದು ಪ್ರಶ್ನೆ ಮಾಡಿದ್ದಾರೆ.
The ₹400 crore robbery case has taken several dramatic turns, triggering a political slugfest between Congress and BJP leaders. Amid the controversy, an audio clip allegedly suggesting that the money belonged to a Gujarat-based politician has gone viral. Karnataka minister Priyank Kharge has questioned the silence of Prime Minister Narendra Modi and Union Home Minister Amit Shah over the issue.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am