ಬ್ರೇಕಿಂಗ್ ನ್ಯೂಸ್
29-01-26 11:03 pm Bangalore Correspondent ಕರ್ನಾಟಕ
ಬೆಂಗಳೂರು, ಜ 29 : 4 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಬಲೆಗೆ ಬಿದ್ದದ್ದಾರೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್ಪೆಕ್ಟರ್ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದು ಠಾಣೆಯ ಮೆಟ್ಟಿಲೇರಿತ್ತು. ಈ ಪ್ರಕರಣವನ್ನು ಇತ್ಯರ್ಥಪಡಿಸಲು ಅಥವಾ ದೂರುದಾರರಿಗೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಇನ್ಸ್ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ, ಚೀಟಿ ವ್ಯವಹಾರದ ದೂರಿನಲ್ಲಿ ವ್ಯಕ್ತಿಯೊಬ್ಬರ ಹೆಸರನ್ನು ಆರೋಪಿ ಪಟ್ಟಿಗೆ ಸೇರಿಸುವುದಾಗಿ ಅಥವಾ ಸೇರಿಸದೇ ಇರಲು ಬೆದರಿಕೆ ಹಾಕಿ ಹಣಕ್ಕೆ ಪೀಡಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣವನ್ನು ಇತ್ಯರ್ಥಪಡಿಸಲು ಗೋವಿಂದರಾಜು ಬರೋಬ್ಬರಿ 4 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಚ್ಛಿಸದ ದೂರುದಾರರು ನೇರವಾಗಿ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸಿ ದೂರು ನೀಡಿದ್ದರು.
KP Agrahara police inspector Govindaraju was caught red-handed by the Lokayukta while accepting a ₹4 lakh bribe to settle a chit fund case. The trap operation, led by the Lokayukta SP, has sparked outrage, with the arrest video now going viral.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm