ಬ್ರೇಕಿಂಗ್ ನ್ಯೂಸ್
02-02-26 03:02 pm HK News Desk ಕರ್ನಾಟಕ
ತುಮಕೂರು, ಫೆ.2 : ಸಿನಿಮಾ ಕಥೆಯಂತಿರುವ ನೈಜ ಘಟನೆಯೊಂದು ತುಮಕೂರು ನಗರದಲ್ಲಿ ನಡೆದಿದೆ. ಶ್ರೀಮಂತ ಉದ್ಯಮಿಯೊಬ್ಬರ ಮಗಳು, ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಮನೆಯ ಪಾರ್ಟ್ ಟೈಂ ವಾಹನ ಚಾಲಕನೊಂದಿಗೆ ಓಡಿಹೋಗಿ ಮದುವೆಯಾಗಿರುವ ಘಟನೆ ಕುಟುಂಬವನ್ನೇ ಬೆಚ್ಚಿಬೀಳಿಸಿದೆ.
ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ನಗರದ ಉದ್ಯಮಿಯೊಬ್ಬರ ಮಗಳಿಗೆ ಅವರದೇ ಮನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ರವೀಶ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈ ವಿಚಾರ ಕುಟುಂಬದವರಿಗೆ ತಿಳಿದು ಎಚ್ಚರಿಕೆ ನೀಡಲಾಗಿತ್ತು. ಈ ನಡುವೆ ಕುಟುಂಬದವರು ಹಿಂದಿನಿಂದ ನಿಶ್ಚಯಿಸಿದ್ದಂತೆ, ಯುವತಿಯ ಮಾವನ ಮಗನೊಂದಿಗೆ ಮದುವೆ ನಿಶ್ಚಯಿಸಿ, ನಿಶ್ಚಿತಾರ್ಥ ಮುಗಿಸಿದ್ದರು. ಮದುವೆ ಆಹ್ವಾನ ಪತ್ರಿಕೆ ಹಂಚಿಕೆ, ಹಾಲ್ ಬುಕ್ಕಿಂಗ್, ಊಟ ಹಾಗೂ ಅಲಂಕಾರ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ.
ಆದರೆ ಮದುವೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ, ಜನವರಿ 19ರಂದು ಯುವತಿ ಮನೆ ಬಿಟ್ಟು ರವೀಶನೊಂದಿಗೆ ಪರಾರಿಯಾಗಿದ್ದಾಳೆ. ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಮದುವೆಯಾಗಿರುವುದು ನಂತರ ಬೆಳಕಿಗೆ ಬಂದಿದೆ. ಮಗಳು ಕಾಣೆಯಾಗಿರುವ ಹಿನ್ನೆಲೆ ಕುಟುಂಬಸ್ಥರು ತುಮಕೂರು ನಗರ ಠಾಣೆಗೆ ದೂರು ನೀಡಿದ್ದರು. ಈ ವೇಳೆ, ಯುವತಿಯೇ ಪೊಲೀಸರ ಮುಂದೆ ಹಾಜರಾಗಿ, “ಕುಟುಂಬದವರಿಂದ ಬೆದರಿಕೆ ಇದೆ. ನನಗೆ ರಕ್ಷಣೆ ಬೇಕು” ಎಂದು ಕೇಳಿಕೊಂಡಿದ್ದಾಳೆ.
ಯುವತಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಕೆಯ ಸಹೋದರ, “ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ನಿಶ್ಚಯಿಸಿಲ್ಲ. ಅವಳ ಒಪ್ಪಿಗೆಯೊಂದಿಗೆ ಚಿನ್ನಾಭರಣ, ಸೀರೆ ಖರೀದಿ ಹಾಗೂ ಮದುವೆ ಕಾರ್ಡ್ ಮುದ್ರಣ ಮಾಡಲಾಗಿತ್ತು. ತಾಯಿಯ ಆರೋಗ್ಯ ಸಮಸ್ಯೆಯ ನಡುವೆಯೂ ಮದುವೆ ಸಿದ್ಧತೆಗಾಗಿ ಓಡಾಡುತ್ತಿದ್ದೆವು. ಮದುವೆ ಇಷ್ಟವಿಲ್ಲ ಎಂದು ಹೇಳಬಹುದಿತ್ತು. ಈ ರೀತಿಯ ನಡೆ ನಮಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.
ಯುವತಿ ಕಾಣೆಯಾದ ಕುರಿತು ಪ್ರಕರಣ ದಾಖಲಾದ ಬಳಿಕ, ಪ್ರೇಮಿಗಳು ಮದುವೆಯಾಗಿರುವುದು ದೃಢಪಟ್ಟಿದೆ. ಕುಟುಂಬಸ್ಥರಿಂದ ಬೆದರಿಕೆ ಆರೋಪ ಇರುವ ಹಿನ್ನೆಲೆಯಲ್ಲಿ, ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಎರಡೂ ಕಡೆಯ ಕುಟುಂಬಗಳು ಒಪ್ಪಿಗೆ ಸೂಚಿಸಿ, ಖುಲಾಸೆ ಪತ್ರಗಳಿಗೆ ಸಹಿ ಹಾಕಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a real-life story resembling a film plot, a wealthy businessman’s daughter eloped with her part-time family driver just a month before her wedding. Despite being engaged to her cousin and with all wedding preparations completed, the woman reportedly left home on January 19 and married the driver, Ravish, in Chikkanayakanahalli.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm