ಬ್ರೇಕಿಂಗ್ ನ್ಯೂಸ್
02-02-26 03:02 pm HK News Desk ಕರ್ನಾಟಕ
ತುಮಕೂರು, ಫೆ.2 : ಸಿನಿಮಾ ಕಥೆಯಂತಿರುವ ನೈಜ ಘಟನೆಯೊಂದು ತುಮಕೂರು ನಗರದಲ್ಲಿ ನಡೆದಿದೆ. ಶ್ರೀಮಂತ ಉದ್ಯಮಿಯೊಬ್ಬರ ಮಗಳು, ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಮನೆಯ ಪಾರ್ಟ್ ಟೈಂ ವಾಹನ ಚಾಲಕನೊಂದಿಗೆ ಓಡಿಹೋಗಿ ಮದುವೆಯಾಗಿರುವ ಘಟನೆ ಕುಟುಂಬವನ್ನೇ ಬೆಚ್ಚಿಬೀಳಿಸಿದೆ.
ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ನಗರದ ಉದ್ಯಮಿಯೊಬ್ಬರ ಮಗಳಿಗೆ ಅವರದೇ ಮನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ರವೀಶ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈ ವಿಚಾರ ಕುಟುಂಬದವರಿಗೆ ತಿಳಿದು ಎಚ್ಚರಿಕೆ ನೀಡಲಾಗಿತ್ತು. ಈ ನಡುವೆ ಕುಟುಂಬದವರು ಹಿಂದಿನಿಂದ ನಿಶ್ಚಯಿಸಿದ್ದಂತೆ, ಯುವತಿಯ ಮಾವನ ಮಗನೊಂದಿಗೆ ಮದುವೆ ನಿಶ್ಚಯಿಸಿ, ನಿಶ್ಚಿತಾರ್ಥ ಮುಗಿಸಿದ್ದರು. ಮದುವೆ ಆಹ್ವಾನ ಪತ್ರಿಕೆ ಹಂಚಿಕೆ, ಹಾಲ್ ಬುಕ್ಕಿಂಗ್, ಊಟ ಹಾಗೂ ಅಲಂಕಾರ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ.
ಆದರೆ ಮದುವೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ, ಜನವರಿ 19ರಂದು ಯುವತಿ ಮನೆ ಬಿಟ್ಟು ರವೀಶನೊಂದಿಗೆ ಪರಾರಿಯಾಗಿದ್ದಾಳೆ. ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಮದುವೆಯಾಗಿರುವುದು ನಂತರ ಬೆಳಕಿಗೆ ಬಂದಿದೆ. ಮಗಳು ಕಾಣೆಯಾಗಿರುವ ಹಿನ್ನೆಲೆ ಕುಟುಂಬಸ್ಥರು ತುಮಕೂರು ನಗರ ಠಾಣೆಗೆ ದೂರು ನೀಡಿದ್ದರು. ಈ ವೇಳೆ, ಯುವತಿಯೇ ಪೊಲೀಸರ ಮುಂದೆ ಹಾಜರಾಗಿ, “ಕುಟುಂಬದವರಿಂದ ಬೆದರಿಕೆ ಇದೆ. ನನಗೆ ರಕ್ಷಣೆ ಬೇಕು” ಎಂದು ಕೇಳಿಕೊಂಡಿದ್ದಾಳೆ.
ಯುವತಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಕೆಯ ಸಹೋದರ, “ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ನಿಶ್ಚಯಿಸಿಲ್ಲ. ಅವಳ ಒಪ್ಪಿಗೆಯೊಂದಿಗೆ ಚಿನ್ನಾಭರಣ, ಸೀರೆ ಖರೀದಿ ಹಾಗೂ ಮದುವೆ ಕಾರ್ಡ್ ಮುದ್ರಣ ಮಾಡಲಾಗಿತ್ತು. ತಾಯಿಯ ಆರೋಗ್ಯ ಸಮಸ್ಯೆಯ ನಡುವೆಯೂ ಮದುವೆ ಸಿದ್ಧತೆಗಾಗಿ ಓಡಾಡುತ್ತಿದ್ದೆವು. ಮದುವೆ ಇಷ್ಟವಿಲ್ಲ ಎಂದು ಹೇಳಬಹುದಿತ್ತು. ಈ ರೀತಿಯ ನಡೆ ನಮಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.
ಯುವತಿ ಕಾಣೆಯಾದ ಕುರಿತು ಪ್ರಕರಣ ದಾಖಲಾದ ಬಳಿಕ, ಪ್ರೇಮಿಗಳು ಮದುವೆಯಾಗಿರುವುದು ದೃಢಪಟ್ಟಿದೆ. ಕುಟುಂಬಸ್ಥರಿಂದ ಬೆದರಿಕೆ ಆರೋಪ ಇರುವ ಹಿನ್ನೆಲೆಯಲ್ಲಿ, ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಎರಡೂ ಕಡೆಯ ಕುಟುಂಬಗಳು ಒಪ್ಪಿಗೆ ಸೂಚಿಸಿ, ಖುಲಾಸೆ ಪತ್ರಗಳಿಗೆ ಸಹಿ ಹಾಕಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a real-life story resembling a film plot, a wealthy businessman’s daughter eloped with her part-time family driver just a month before her wedding. Despite being engaged to her cousin and with all wedding preparations completed, the woman reportedly left home on January 19 and married the driver, Ravish, in Chikkanayakanahalli.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm