ಬ್ರೇಕಿಂಗ್ ನ್ಯೂಸ್
02-02-26 03:02 pm HK News Desk ಕರ್ನಾಟಕ
ತುಮಕೂರು, ಫೆ.2 : ಸಿನಿಮಾ ಕಥೆಯಂತಿರುವ ನೈಜ ಘಟನೆಯೊಂದು ತುಮಕೂರು ನಗರದಲ್ಲಿ ನಡೆದಿದೆ. ಶ್ರೀಮಂತ ಉದ್ಯಮಿಯೊಬ್ಬರ ಮಗಳು, ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಮನೆಯ ಪಾರ್ಟ್ ಟೈಂ ವಾಹನ ಚಾಲಕನೊಂದಿಗೆ ಓಡಿಹೋಗಿ ಮದುವೆಯಾಗಿರುವ ಘಟನೆ ಕುಟುಂಬವನ್ನೇ ಬೆಚ್ಚಿಬೀಳಿಸಿದೆ.
ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ನಗರದ ಉದ್ಯಮಿಯೊಬ್ಬರ ಮಗಳಿಗೆ ಅವರದೇ ಮನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ರವೀಶ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈ ವಿಚಾರ ಕುಟುಂಬದವರಿಗೆ ತಿಳಿದು ಎಚ್ಚರಿಕೆ ನೀಡಲಾಗಿತ್ತು. ಈ ನಡುವೆ ಕುಟುಂಬದವರು ಹಿಂದಿನಿಂದ ನಿಶ್ಚಯಿಸಿದ್ದಂತೆ, ಯುವತಿಯ ಮಾವನ ಮಗನೊಂದಿಗೆ ಮದುವೆ ನಿಶ್ಚಯಿಸಿ, ನಿಶ್ಚಿತಾರ್ಥ ಮುಗಿಸಿದ್ದರು. ಮದುವೆ ಆಹ್ವಾನ ಪತ್ರಿಕೆ ಹಂಚಿಕೆ, ಹಾಲ್ ಬುಕ್ಕಿಂಗ್, ಊಟ ಹಾಗೂ ಅಲಂಕಾರ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ.
ಆದರೆ ಮದುವೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ, ಜನವರಿ 19ರಂದು ಯುವತಿ ಮನೆ ಬಿಟ್ಟು ರವೀಶನೊಂದಿಗೆ ಪರಾರಿಯಾಗಿದ್ದಾಳೆ. ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಮದುವೆಯಾಗಿರುವುದು ನಂತರ ಬೆಳಕಿಗೆ ಬಂದಿದೆ. ಮಗಳು ಕಾಣೆಯಾಗಿರುವ ಹಿನ್ನೆಲೆ ಕುಟುಂಬಸ್ಥರು ತುಮಕೂರು ನಗರ ಠಾಣೆಗೆ ದೂರು ನೀಡಿದ್ದರು. ಈ ವೇಳೆ, ಯುವತಿಯೇ ಪೊಲೀಸರ ಮುಂದೆ ಹಾಜರಾಗಿ, “ಕುಟುಂಬದವರಿಂದ ಬೆದರಿಕೆ ಇದೆ. ನನಗೆ ರಕ್ಷಣೆ ಬೇಕು” ಎಂದು ಕೇಳಿಕೊಂಡಿದ್ದಾಳೆ.
ಯುವತಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಕೆಯ ಸಹೋದರ, “ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ನಿಶ್ಚಯಿಸಿಲ್ಲ. ಅವಳ ಒಪ್ಪಿಗೆಯೊಂದಿಗೆ ಚಿನ್ನಾಭರಣ, ಸೀರೆ ಖರೀದಿ ಹಾಗೂ ಮದುವೆ ಕಾರ್ಡ್ ಮುದ್ರಣ ಮಾಡಲಾಗಿತ್ತು. ತಾಯಿಯ ಆರೋಗ್ಯ ಸಮಸ್ಯೆಯ ನಡುವೆಯೂ ಮದುವೆ ಸಿದ್ಧತೆಗಾಗಿ ಓಡಾಡುತ್ತಿದ್ದೆವು. ಮದುವೆ ಇಷ್ಟವಿಲ್ಲ ಎಂದು ಹೇಳಬಹುದಿತ್ತು. ಈ ರೀತಿಯ ನಡೆ ನಮಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.
ಯುವತಿ ಕಾಣೆಯಾದ ಕುರಿತು ಪ್ರಕರಣ ದಾಖಲಾದ ಬಳಿಕ, ಪ್ರೇಮಿಗಳು ಮದುವೆಯಾಗಿರುವುದು ದೃಢಪಟ್ಟಿದೆ. ಕುಟುಂಬಸ್ಥರಿಂದ ಬೆದರಿಕೆ ಆರೋಪ ಇರುವ ಹಿನ್ನೆಲೆಯಲ್ಲಿ, ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಎರಡೂ ಕಡೆಯ ಕುಟುಂಬಗಳು ಒಪ್ಪಿಗೆ ಸೂಚಿಸಿ, ಖುಲಾಸೆ ಪತ್ರಗಳಿಗೆ ಸಹಿ ಹಾಕಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a real-life story resembling a film plot, a wealthy businessman’s daughter eloped with her part-time family driver just a month before her wedding. Despite being engaged to her cousin and with all wedding preparations completed, the woman reportedly left home on January 19 and married the driver, Ravish, in Chikkanayakanahalli.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am