ಬ್ರೇಕಿಂಗ್ ನ್ಯೂಸ್
02-02-26 11:02 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.2: ಚಿಕ್ಕಮಗಳೂರು - ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿದ್ದು ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿದಿದೆ. ಯಾರೋ ಕಿಡಿಗೇಡಿಗಳೋ ಅಥವಾ ಸ್ಥಳೀಯರೇ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ.
ಗಾಳಿಯ ವೇಗಕ್ಕೆ ಬೆಂಕಿ ವೇಗವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗಲಿದೆ. ರಸ್ತೆ ಪಕ್ಕದಲ್ಲೇ ಬೆಂಕಿ ಕಾಣಿಸಿದ್ದು ಘಾಟಿಯಲ್ಲಿ ಸಂಚರಿಸುವ ವಾಹನ ಪ್ರಯಾಣಿಕರೇ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ಇದೆ. ಕಿಡಿಗೇಡಿಗಳು ಉದ್ದೇಶಪೂರ್ವಕ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಪ್ರತಿ ಬಾರಿ ಬೆಂಕಿ ಉಂಟಾಗುತ್ತಿದ್ದು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಲ್ಲಿ ಎಸ್ಟೇಟ್ ಮಾಫಿಯಾ ವಿಸ್ತರಣೆಯ ಉದ್ದೇಶ ಒಂದೆಡೆಯಾದರೆ, ಇಂಥವರಿಗೆ ಅಧಿಕಾರಿಗಳ ಮೌನ ಸಮ್ಮತಿಯೂ ಇದರ ಹಿಂದಿರುತ್ತದೆ. ಜನವರಿ ವೇಳೆಗೆ ಅಷ್ಟೊಂದು ಬಿಸಿಲು ಇಲ್ಲದಿದ್ದರೂ ಬೆಂಕಿ ಹಚ್ಚುವುದು ಸಾಮಾನ್ಯ ಎನ್ನುವಂತಾಗಿದೆ. ಅರಣ್ಯಕ್ಕೆ ಬೆಂಕಿ ಹಚ್ಚುವುದು ಕಾನೂನು ರೀತ್ಯ ಅಪರಾಧವಾಗಿದ್ದು ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡದೆ ಕ್ರಮ ಜರುಗಿಸದಿರುವುದು ಇಂಥ ಕೃತ್ಯಗಳಿಗೆ ಕಡಿವಾಣ ಇಲ್ಲದಾಗಿದೆ. ಎರಡು ವಾರದ ಹಿಂದಷ್ಟೇ ಇದೇ ಭಾಗದಲ್ಲಿ ಬೆಂಕಿ ಉಂಟಾಗಿತ್ತು.
A major fire broke out in the Charmadi Ghat forest area under Mudigere range, damaging sensitive Western Ghats grasslands. With repeated incidents raising suspicions of deliberate arson, questions are being raised over alleged negligence and inaction by forest authorities. Firefighting operations are underway.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm