ಬ್ರೇಕಿಂಗ್ ನ್ಯೂಸ್
02-02-26 11:02 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.2: ಚಿಕ್ಕಮಗಳೂರು - ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿದ್ದು ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿದಿದೆ. ಯಾರೋ ಕಿಡಿಗೇಡಿಗಳೋ ಅಥವಾ ಸ್ಥಳೀಯರೇ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ.
ಗಾಳಿಯ ವೇಗಕ್ಕೆ ಬೆಂಕಿ ವೇಗವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗಲಿದೆ. ರಸ್ತೆ ಪಕ್ಕದಲ್ಲೇ ಬೆಂಕಿ ಕಾಣಿಸಿದ್ದು ಘಾಟಿಯಲ್ಲಿ ಸಂಚರಿಸುವ ವಾಹನ ಪ್ರಯಾಣಿಕರೇ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ಇದೆ. ಕಿಡಿಗೇಡಿಗಳು ಉದ್ದೇಶಪೂರ್ವಕ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಪ್ರತಿ ಬಾರಿ ಬೆಂಕಿ ಉಂಟಾಗುತ್ತಿದ್ದು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಲ್ಲಿ ಎಸ್ಟೇಟ್ ಮಾಫಿಯಾ ವಿಸ್ತರಣೆಯ ಉದ್ದೇಶ ಒಂದೆಡೆಯಾದರೆ, ಇಂಥವರಿಗೆ ಅಧಿಕಾರಿಗಳ ಮೌನ ಸಮ್ಮತಿಯೂ ಇದರ ಹಿಂದಿರುತ್ತದೆ. ಜನವರಿ ವೇಳೆಗೆ ಅಷ್ಟೊಂದು ಬಿಸಿಲು ಇಲ್ಲದಿದ್ದರೂ ಬೆಂಕಿ ಹಚ್ಚುವುದು ಸಾಮಾನ್ಯ ಎನ್ನುವಂತಾಗಿದೆ. ಅರಣ್ಯಕ್ಕೆ ಬೆಂಕಿ ಹಚ್ಚುವುದು ಕಾನೂನು ರೀತ್ಯ ಅಪರಾಧವಾಗಿದ್ದು ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡದೆ ಕ್ರಮ ಜರುಗಿಸದಿರುವುದು ಇಂಥ ಕೃತ್ಯಗಳಿಗೆ ಕಡಿವಾಣ ಇಲ್ಲದಾಗಿದೆ. ಎರಡು ವಾರದ ಹಿಂದಷ್ಟೇ ಇದೇ ಭಾಗದಲ್ಲಿ ಬೆಂಕಿ ಉಂಟಾಗಿತ್ತು.
A major fire broke out in the Charmadi Ghat forest area under Mudigere range, damaging sensitive Western Ghats grasslands. With repeated incidents raising suspicions of deliberate arson, questions are being raised over alleged negligence and inaction by forest authorities. Firefighting operations are underway.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm