ಬ್ರೇಕಿಂಗ್ ನ್ಯೂಸ್
03-02-26 05:03 pm HK News Desk ಕರ್ನಾಟಕ
ಕಾರವಾರ, ಫೆ.3 : ಜ್ಯೋತಿಷಿ ಜೊತೆಗಿನ ಮಹಿಳೆಯ ಅಕ್ರಮ ಸಂಬಂಧದ ಆರೋಪದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ವ್ಯಕ್ತಿಯೊಬ್ಬನ ಕೊಲೆಗೆ ಕಾರಣವಾಗಿದೆ. ಕಮಲಾಕರ ಭಟ್ ಗುರೂಜಿ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಕ್ಕೆ ಆರು ಮಂದಿಯ ತಂಡ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಶಿವಮೊಗ್ಗ ಮೂಲದ ಕಮಲಾಕರ ಭಟ್ ಎಂಬ ಗುರೂಜಿಯೊಂದಿಗೆ ಸುಚಿತ್ರಾ ಎಂಬ ಮಹಿಳೆ ಅಕ್ರಮ ಸಂಬಂಧ ಹೊಂದಿದ್ದು ಇದರ ಬಗ್ಗೆ ಆಕೆಯ ಪತಿ ಮಹೇಶ್ ನಾಯ್ಕ್ ಪೊಲೀಸರಿಗೆ ದೂರು ನೀಡಿದ್ದರು. ಕಮಲಾಕರ ಭಟ್ ಮೂಲತಃ ಸಿದ್ದಾಪುರ ತಾಲೂಕಿನ ಹೆಮ್ಮನಬೈಲ್ ಗ್ರಾಮದ ನಿವಾಸಿಯಾಗಿದ್ದು ಮಹೇಶ್ ನಾಯ್ಕ್ ದೂರಿನಂತೆ ಪೊಲೀಸರು ಕಮಲಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರಿಂದ ಆಕ್ರೋಶಗೊಂಡ ಸುಚಿತ್ರಾ, ಮತ್ತು ಆಕೆಯ ತಂದೆ ಲೋಕನಾಥ ಚೌಡಪ್ಪ ನಾಯ್ಕ್ ಹಾಗೂ ಅವರ ಸಹಚರರು ಮಹೇಶ್ ನಾಯ್ಕ್ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ದಾಳಿ ವೇಳೆ ಮಹೇಶ್ ನಾಯ್ಕ್, ವಸಂತ ನಾಯ್ಕ್ ಮತ್ತು ಕುಮಾರ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ವಸಂತ ನಾಯ್ಕ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಘಟನೆ ಬಳಿಕ ಆರೋಪಿಗಳು ಪರಾರಿಯಾಗಲು ಯತ್ನಿಸಿದರೂ, ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಕಮಲಾಕರ ಭಟ್ ಸೇರಿ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಇತರ ಅಪರಿಚಿತ ಆರೋಪಿಗಳು, ಎ4 ಕಮಲಾಕರ ಭಟ್ ಎಂದು ಆರೋಪಿಗಳನ್ನು ಗುರುತಿಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಗಂಡ ಮಹೇಶ್ ನಾಯ್ಕ್ ಬೆಂಗಳೂರಿನಲ್ಲಿದ್ದರೆ, ಇಬ್ಬರು ಬೆಳೆದು ನಿಂತ ಹೆಣ್ಣು ಮಕ್ಕಳೊಂದಿಗೆ ಸುಚಿತ್ರಾ ಸಿದ್ದಾಪುರದಲ್ಲಿ ವಾಸವಿದ್ದಳು. ಸುಚಿತ್ರಾಳಿಗೆ ಇತ್ತೀಚೆಗೆ ಜ್ಯೋತಿಷಿ ಕಮಲಾಕರ್ ಭಟ್ ಪರಿಚಯವಾಗಿತ್ತು. ನಂತರ ಇಬ್ಬರ ನಡುವೆ ಸಲುಗೆ ಬೆಳೆದು ಕಮಲಾಕರ್ ಭಟ್ ಕೆಲವೊಮ್ಮೆ ಸುಚಿತ್ರಾ ಮನೆಗೆ ಬಂದು ಅಲ್ಲಿಯೇ ಉಳಿಯುತ್ತಿದ್ದನು. ಇದರಿಂದ ಕಸಿವಿಸಿಕೊಂಡಿದ್ದ ಹಿರಿಯ ಮಗಳು ತಾಯಿ ವರ್ತನೆಯನ್ನು ಪ್ರಶ್ನಿಸಿದ್ದಳು. ಕೋಪಗೊಂಡ ಸುಚಿತ್ರಾ ಮಕ್ಕಳಿಗೆ ಹಿಂಸೆ ನೀಡಲು ಶುರು ಮಾಡಿದ್ದಳು. ಕೊನೆಗೆ ಹಿರಿಯ ಪುತ್ರಿ ಎಲ್ಲಾ ವಿಚಾರವನ್ನು ತಂದೆಗೆ ತಿಳಿಸಿದ್ದಾಳೆ.
ಮಗಳಿಂದ ಪತ್ನಿಯ ಅಕ್ರಮ ಸಂಬಂಧದ ವಿಷಯ ತಿಳಿದ ಮಹೇಶ್ ನಾಯ್ಕ್ ಊರಿಗೆ ತೆರಳಿದ್ದು ಸಿದ್ದಾಪುರ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿ ಸಹೋದರ ವಸಂತ್ ಮನೆಗೆ ಮಹೇಶ್ ತೆರಳಿದ್ದರು. ತಮ್ಮ ವಿರುದ್ಧ ದೂರು ನೀಡಿರುವ ವಿಚಾರ ತಿಳಿದ ಸುಚಿತ್ರಾ ಮತ್ತು ಆಕೆಯ ತಂದೆ ಲೋಕನಾಥ್ ಗುರೂಜಿ ಪರವಾಗಿ ಗುಂಪು ಕಟ್ಟಿಕೊಂಡು ವಸಂತ್ ಮನೆಗೆ ಹೋಗಿ ಗಲಾಟೆ ಮಾಡಿದ್ದಾರೆ. ನಂತರ ಮಹೇಶ್ ನಾಯ್ಕ್, ವಸಂತ್ ನಾಯ್ಕ್ ಮತ್ತು ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ವಸಂತ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
A complaint over an alleged illicit relationship between a woman and astrologer Kamalakar Bhat led to a violent attack in Siddapur, Uttara Kannada district. After the woman’s husband filed a police complaint, a group allegedly assaulted him and his relatives. Vasanth Naik died on the way to the hospital, while two others are in critical condition.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm