ಬ್ರೇಕಿಂಗ್ ನ್ಯೂಸ್
03-02-26 05:34 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.3 : ಕಾನ್ಪಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ ಆತ್ಮಹತ್ಯೆ ಸುದ್ದಿ ಸಂಚಲನ ಮೂಡಿಸಿರುವಾಗಲೇ ಸಾವಿಗೂ ಮುನ್ನ ಬರೆದಿಟ್ಟಿದ್ದಾರೆ ಎನ್ನಲಾದ ಒಂಬತ್ತು ಪುಟಗಳ ಡೆತ್ ನೋಟ್ ಪೊಲೀಸರಿಗೆ ಲಭಿಸಿದೆ. ಡೈರಿಯಲ್ಲಿ ಬರೆದ ಸುದೀರ್ಘ ಡೆತ್ ನೋಟ್ ನಲ್ಲಿ ಅವರು ತಮ್ಮ ಸಾವಿನ ಬಗ್ಗೆ ಹೇಳಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವಾದ ಅಂಶಗಳನ್ನು ಉಲ್ಲೇಖಿಸಿದ್ದು ಎಸ್ಐಟಿ ತನಿಖೆಗೆ ಹೊಸ ದಿಕ್ಕು ತೋರಿಸಿದೆ.
ಸಿ.ಜೆ. ರಾಯ್ ಡೆತ್ ನೋಟ್ನಲ್ಲಿ ತಮ್ಮ ಕುಟುಂಬಸ್ಥರಿಗೆ ಕ್ಷಮೆ ಯಾಚಿಸಿದ್ದಾರೆ. "ತೀವ್ರವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನನ್ನು ಕ್ಷಮಿಸಿ" ಎಂದವರು ಕುಟುಂಬಸ್ಥರಲ್ಲಿ ಹೇಳಿದ್ದಾರೆ. ಅಲ್ಲದೆ, ತಮಗೆ ಯಾರಿಂದ ಎಷ್ಟು ಹಣ ಬರಬೇಕಿದೆ ಎಂಬ ವಿವರಗಳನ್ನು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಸಾವಿನ ನಂತರ ಉದ್ಯಮ, ವ್ಯವಹಾರವನ್ನು ಯಾರು ನೋಡಿಕೊಳ್ಳಬೇಕು, ಉತ್ತರಾಧಿಕಾರಿಗಳು ಯಾರಾಗಬೇಕು ಎಂಬುದನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಈ ಪತ್ರದಲ್ಲಿ ಉದ್ಯಮದ ಏರಿಳಿತಗಳು, ಸಾಲದ ಹೊರೆ ಮತ್ತು ಹಲವು ಗಣ್ಯರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದಲ್ಲದೆ, ಕರ್ನಾಟಕ ಮತ್ತು ಕೇರಳದ ರಾಜಕಾರಣಿಗಳು, ಉದ್ಯಮ ಪಾಲುದಾರರ ಬಗ್ಗೆಯೂ ಉಲ್ಲೇಖ ಇದೆ. 'ಕಾನ್ಪಿಡೆಂಟ್ ಗ್ರೂಪ್'ನೊಂದಿಗೆ ಹಿಂದಿನಿಂದಲೂ ಕೆಲಸ ಮಾಡುತ್ತಿರುವವರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಅವರನ್ನು ಜೊತೆಯಲ್ಲೇ ಇಟ್ಟುಕೊಳ್ಳಬೇಕು. ಅವರೆಲ್ಲಾ ನಂಬಿಕಸ್ಥ ವ್ಯಕ್ತಿಗಳು ಎಂದು ಸಿ.ಜೆ. ರಾಯ್ ಡೆತ್ ನೋಟ್ನಲ್ಲಿ ಬರೆದಿದ್ದಾರೆ. ಮೂರು ದಿನಗಳ ಹಿಂದೆ ಐಟಿ ಇಲಾಖೆ ಅಧಿಕಾರಿಗಳ ಕರೆ ಹಿನ್ನೆಲೆಯಲ್ಲಿ ದುಬೈನಿಂದ ರಾಯ್ ಬೆಂಗಳೂರಿಗೆ ಬಂದಿದ್ದರು. ಎಸ್ಐಟಿ ಅಧಿಕಾರಿಗಳು ಡೆತ್ ನೋಟ್ ಪರಿಶೀಲಿಸುತ್ತಿದ್ದು ಇದರ ಆಧಾರದ ಮೇಲೆ ಸಿ.ಜೆ. ರಾಯ್ ಪತ್ನಿ ಮತ್ತು ಮಕ್ಕಳಿಂದ ಹೇಳಿಕೆಗಳನ್ನು ಪಡೆಯಲಿದ್ದಾರೆ.
ಇತ್ತೀಚೆಗೆ ಯೂಟ್ಯೂಬ್ ಸಂದರ್ಶನದಲ್ಲಿ ಅವರು, ತಮಗೆ ದಿಢೀರ್ ಸಾವು ಎದುರಾದರೆ ಉದ್ಯಮದ ಎಲ್ಲ ವಿಚಾರ ಪತ್ನಿಗೆ ತಿಳಿದಿದೆ, ಯಾವುದೇ ಗೊಂದಲ ಬೇಕಾಗಲ್ಲ ಎಂದು ಹೇಳಿದ್ದರು. ಹೀಗಾಗಿ ಸಿ.ಜೆ.ರಾಯ್ ಅವರ ಹಣಕಾಸಿನ ವಿವರಗಳು ಪತ್ನಿಗೆ ತಿಳಿದಿವೆ ಎನ್ನಲಾಗುತ್ತಿದ್ದು ಈ ಬಗ್ಗೆ ಪತ್ನಿಯಿಂದ ಹೆಚ್ಚಿನ ವಿವರಗಳನ್ನು ಪಡೆಯಲು ಎಸ್ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.
A nine-page death note allegedly written by Confident Group chief C.J. Roy before his suicide has been recovered by police. In the letter, Roy reportedly apologized to his family, detailed financial liabilities, named business associates and politicians from Kerala and Karnataka, and outlined succession plans for his business. The SIT is examining the note as part of its ongoing investigation.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm