ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ್ ಡಿಕ್ಕಿ, ಮೂವರು ಕೂಲಿ ಕಾರ್ಮಿಕರ ಬಲಿ, 15 ಮಂದಿಗೆ ಗಾಯ

05-02-26 03:11 pm       HK News Desk   ಕರ್ನಾಟಕ

ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಇಂದು ಬೆಳಗ್ಗೆ ಕ್ರೂಸರ್ ಹಾಗೂ ಕ್ಯಾಂಟರ್ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗದಗ, ಫೆ.6 : ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಇಂದು ಬೆಳಗ್ಗೆ ಕ್ರೂಸರ್ ಹಾಗೂ ಕ್ಯಾಂಟರ್ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಜೇಂದ್ರಗಡದಿಂದ ರೋಣದ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಒಟ್ಟು 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಆರು ಜನರಿಗೆ ಕೈ ಹಾಗೂ ಕಾಲು ಮುರಿತವಾಗಿದ್ದು ಚಿಕಿತ್ಸೆ ಮುಂದುವರೆದಿದೆ.

ಮೃತಪಟ್ಟವರನ್ನು ಗಜೇಂದ್ರಗಡ ಪಟ್ಟಣದ ಶಿವಾಜಿಪೇಟೆ ನಿವಾಸಿಗಳಾದ ಮರಿಯಂ ಹುನಗುಂದ (55), ಅನ್ನಪೂರ್ಣ ಚಂಗಳಿ (45) ಮತ್ತು ಸುಜಾತ ಹೊಸಮನಿ (30) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಗಾಯಾಳುಗಳ ಸ್ಥಿತಿ ಕಂಡು ಸಂಬಂಧಿಕರು ಕಣ್ಣೀರು ಹಾಕುತ್ತಿರುವ ದೃಶ್ಯಗಳು ಮನಕಲಕುವಂತಿವೆ.

Three daily wage labourers were killed on the spot and 15 others sustained injuries in a tragic road accident near Jigallur Cross in Ron taluk of Gadag district on Thursday morning. The mishap occurred when a Cruiser vehicle collided head-on with a Canter while travelling from Gajendragad towards Ron.