ಬ್ರೇಕಿಂಗ್ ನ್ಯೂಸ್
07-02-26 02:58 pm HK News Desk ಕರ್ನಾಟಕ
ಬೀದರ್, ಫೆ.7: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ಏನೂ ಇಲ್ಲ. ಈ ಬಗ್ಗೆ ಹೈಕಮಾಂಡ್ ಏನೂ ಹೇಳಿಲ್ಲ ಎಂದು ಸಿಎಂ ಪುತ್ರ, ಯತೀಂದ್ರ ಸಿದ್ದರಾಮಯ್ಯ ಅವರು ಬೀದರ್ ನಲ್ಲಿ ಮತ್ತೆ ಪುನರುಚ್ಚರಿಸಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಲೀಡರ್ಶಿಪ್ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯಲ್ಲ ಅಂತ ಹೇಳೋಕೆ ಯಾವುದೇ ಕಾರಣಗಳಿಲ್ಲ. ಹೈಕಮಾಂಡ್ ನಾಯಕರು ಲೀಡರ್ಶಿಪ್ ಬದಲಾವಣೆ ಬಗ್ಗೆ ಏನೂ ಹೇಳಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ ಎಂದು ಬೀದರ್ ಪ್ರವಾಸದಲ್ಲಿರುವ ಯತೀಂದ್ರ ಕಡ್ಡಿ ಮುರಿದಂತೆ ಹೇಳಿಕೆ ನೀಡಿದ್ದಾರೆ.
'ಯತೀಂದ್ರ ಅವರೇ ನಮ್ಮ ಹೈಕಮಾಂಡ್' ಎಂಬ ಡಿಕೆಶಿ ವ್ಯಂಗ್ಯದ ಹೇಳಿಕೆಗೆ, ಡಿಕೆಶಿ ಅವರು ಆ ರೀತಿ ಹೇಳಿದ್ದು ಸರಿಯಲ್ಲ ಎಂದೂ ತಿರುಗೇಟು ನೀಡಿದ್ದಾರೆ. ಹೈಕಮಾಂಡ್ ನಿರ್ಣಯಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಥವಾ ನಾನು ಯಾರೇ ಆದ್ರೂ ಬದ್ಧವಾಗಿರ್ತೇವೆ. ಹೈಕಮಾಂಡ್ ಲೀಡರ್ಶಿಪ್ ಬದಲಾವಣೆ ಮಾಡ್ತೇವೆ ಅಂತಾ ಎಲ್ಲೂ ಹೇಳಿಲ್ಲ. ಹಾಗಾಗಿ ಸಿಎಂ ಬದಲಾವಣೆ ಇಲ್ಲ ಎಂದು ಯತೀಂದ್ರ ಹೇಳಿದ್ದಾರೆ .
ಮಾತು ಕೊಟ್ಟಿಲ್ಲ ಅಂತ ಸಿದ್ದರಾಮಯ್ಯರೇ ಕ್ಲೀಯರ್ ಮಾಡಲಿ..
ಯತೀಂದ್ರ ಹೇಳಿಕೆಯನ್ನು ಡಿಕೆಶಿ ಬಣದ ದಾವಣಗೆರೆ ಶಾಸಕ ಬಸವರಾಜು ಶಿವಗಂಗಾ ನಿರಾಕರಿಸಿದ್ದು ಇದರ ಬಗ್ಗೆ ಹೈಕಮಾಂಡ್ ಕೂಡಲೇ ಸ್ಪಷ್ಟಪಡಿಸಲಿ. ಸಿದ್ದರಾಮಯ್ಯ ಅವರೇ ಕ್ಲೀಯರ್ ಮಾಡಲಿ, ನಾನು ಯಾವುದೇ ಮಾತು ಕೊಟ್ಟಿಲ್ಲ ಅಂತ. ಆಗ ನಾವು ಯಾವುದೇ ಪ್ರಶ್ನೆ ಎತ್ತೋದಿಲ್ಲ ಎಂದಿದ್ದಾರೆ. ಅಲ್ಲದೆ, ಅಧಿಕಾರ ಹಂಚಿಕೆಯಾಗಿದೆ ಎಂದು ನನಗೆ ಮಾಹಿತಿ ಇದೆ. ಡಿಕೆಶಿಗೆ 139 ಶಾಸಕರ ಬೆಂಬಲವಿದೆ. 40 ರಿಂದ 50 ಜನ ನಮ್ಮಂತ ಯುವ ಶಾಸಕರು ಡಿಕೆಶಿ ಏನೇ ಹೇಳಿದ್ರೂ ಮಾಡಲು ರೆಡಿ ಇದ್ದೇವೆ. ಅವರು ಪ್ರಾಣ ಕೇಳಿದ್ರು ಕೊಡೋಕೆ ರೆಡಿ ಇದೀವಿ. ನನಗಿರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಎಂದು ದಾವಣಗೆರೆಯಲ್ಲಿ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಹೇಳಿದ್ದಾರೆ.
ಯತೀಂದ್ರ ವೈಯಕ್ತಿಕ ಹೇಳಿಕೆ; ಪರಮೇಶ್ವರ್
ಇದೇ ವೇಳೆ, ತನ್ನ ತಂದೆಯೇ 5 ವರ್ಷ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಅದು ಅವರ ವೈಯಕ್ತಿಕ ಹೇಳಿಕೆ. ಯತೀಂದ್ರ ಯಾವ ಮಾಹಿತಿ ಪಡೆದು ಹೇಳಿದ್ರು ಗೊತ್ತಿಲ್ಲ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡತ್ತೆ. ಸದ್ಯಕ್ಕೆ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾದ್ಯಮಗಳು ಗೊಂದಲ ಎಂದು ಹೇಳುತ್ತಿದ್ದೀರಾ ಅಷ್ಟೇ. ಗೊಂದಲ ಇದ್ರೆ ಸಿ.ಎಲ್.ಪಿ ಸಭೆಯಲ್ಲಿ ಗೊತ್ತಾಗುತ್ತಿತ್ತು. ಮೊನ್ನೆ ನಡೆದ ಸಭೆಯಲ್ಲೂ ಯಾರು ಏನು ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm